ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ ಆಹಾರ ಇಲಾಖೆ ಶಿರಸ್ತೇದಾರ್ ಪುಷ್ಪಲತಾ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ದಾಳಿ ನಡೆಸಿದರು.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅನ್ನಭಾಗ್ಯದ ನಾಲ್ಕು ಕ್ವಿಂಟಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿಯನ್ನು ವಶಕ್ಕೆ ಪಡೆದಿದ್ದಾರೆ. ಈ
ಕುರಿತು ಗೋದಾಮು ಮಾಲೀಕರಿಗೆ ವಿಚಾರಿಸಿದಾಗ, ಅವರು ಹಾರಿಕೆಯ ಉತ್ತರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮತ್ತು ಆಹಾರ ಇಲಾಖೆ ಹಿರಿಯ ಅಧಿಕಾರಿಗಳ ಆದೇಶದಂತೆ ಗೋದಾಮು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಆಹಾರ ಇಲಾಖೆ ಶಿರಸ್ತೇದಾರ್ ಪುಷ್ಪಲತಾ ತಿಳಿಸಿದರು.
ಗ್ರಾಮಾಂತರ ಠಾಣೆಯ ಪಿಎಸ್ಐ ರಮೇಶ್ ಗುಗ್ಗರಿ, ರಾಜಸ್ವ ನಿರೀಕ್ಷಕ ಖಾದರ್ ಹಾಗೂ ಆಹಾರ ಇಲಾಖೆ ಸಿಬ್ಬಂದಿ ಹಾಜರಿದ್ದರು.
ವರದಿ: ಅವಿನಾಶ್
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…