Crime

ಐಶ್ವರ್ಯ ಗೌಡ ಮತ್ತೊಂದು ಪ್ರಕರಣ ಬೆಳಕಿಗೆ: ವೈದ್ಯನಿಗೆ 5 ಕೋಟಿ ದೋಖಾ

ಮಾಜಿ ಸಂಸದ ಡಿ.ಕೆ. ಸುರೆಶ್ ಅವರ ಸಹೋದರಿ ಎಂದು ದುಷ್ಕೃತ್ಯ ಮಾಡುತ್ತಿದ್ದ ಐಶ್ವರ್ಯ ಗೌಡ ಇದೀಗ ಮತ್ತೊಂದು ದೊಡ್ಡ ವಂಚನೆ ಪ್ರಕರಣದಲ್ಲಿ ಬಂಧಿತಳಾಗಿದ್ದಾಳೆ. ಆರ್.ಆರ್.ನಗರ ಠಾಣೆಯಲ್ಲಿ ಸಲ್ಲಿಸಿರುವ ದೂರುನಂತರ, ಈ ಬಾರಿ ಐಶ್ವರ್ಯ ಗೌಡ ಮತ್ತು ಅವಳ ಪತಿ ಹರೀಶ್ ಕೆ.ಎನ್. ಎಂಬವರ ವಿರುದ್ಧ 5.3 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬರುತ್ತಿದೆ.
ಐಶ್ವರ್ಯ ಗೌಡ, ಪ್ರತಿ ಸಮಯದಲ್ಲಿಯೂ ಶ್ರೀಮಂತರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದಳು. ಇದೀಗ, ವೈದ್ಯೆ ಡಾ. ಮಂಜುಳಾ ಪಾಟೀಲ್ ಅವರ ಮೇಲೆ ಆಕೆಯು ಬಲವಂತವಾಗಿ ಹಣ ವಶಪಡಿಸಿಕೊಂಡಿರುವುದಾಗಿ ದೂರು ನೀಡಿದ್ದಾರೆ.
2022ರಿಂದ 2024 ರವರೆಗೆ ಐಶ್ವರ್ಯ ಗೌಡ ಮತ್ತು ಅವಳ ಪತಿ, ಇಬ್ಬರೂ ಸೇರಿ ವೈದ್ಯೆ ಡಾ. ಮಂಜುಳಾ ಪಾಟೀಲ್ ಅವರನ್ನು ನಂಬಿಸಿದ್ದರೆಂದು ತಿಳಿದು ಬಂದಿದೆ. ಐಶ್ವರ್ಯವು ತನ್ನನ್ನು ಡಿ.ಕೆ. ಸುರೆಶ್ ಅವರ ತಂಗಿ ಎಂದು ಪರಿಚಯಿಸಿಕೊಂಡು, ರಿಯಲ್ ಎಸ್ಟೇಟ್, ಗೋಲ್ಡ್ ಬ್ಯುಸಿನೆಸ್ ಮತ್ತು ಕೆಸಿನೋ ವ್ಯಾಪಾರದ ಬಗ್ಗೆ ಅನೇಕ ಭರವಸೆಗಳನ್ನು ನೀಡಿದ್ದಾಳೆ.
ಹಾಗೆ ಹೂಡಿಕೆಗಳು ಮತ್ತು ಇನ್ನಿತರ ಕಾರಣಗಳನ್ನು ತಂದು, 2.52 ಕೋಟಿ ರೂ. ಹಣ ಮತ್ತು 2.50 ಕೋಟಿ ರೂಪಾಯಿ ಮೌಲ್ಯದ 2 ಕೆ.ಜಿ 350 ಗ್ರಾಂ ಚಿನ್ನಾಭರಣಗಳನ್ನು ಪಡೆದಿದ್ದಳು. ಆದರೆ, ನಂತರ ಆಕೆಯು ಹಣವನ್ನು ಹಿಂದಿರುಗಿಸದೆ “ಹಣದ ಬಗ್ಗೆ ದೂರು ಅಥವಾ ಸಾಕ್ಷಿ ಏನಾದರೂ ಹೇಳಿದ್ರೆ ಅಷ್ಟೆ ಗೊತ್ತಲ್ಲಾ? ನಾನು ಡಿಕೆ ಸುರೇಶ್ ತಂಗಿ ನಿನ್ನ ಹಣ ವಾಪಸ್ ಕೊಡುವುದಿಲ್ಲ” ಎಂದು ಬೆದರಿಕೆ ಹಾಕಿದಳು.
ಈ ಪ್ರಕರಣ ಬೆಳಕಿಗೆ ಬರುವುದರೊಂದಿಗೆ, ವೈದ್ಯೆ ಡಾ. ಮಂಜುಳಾ ಪಾಟೀಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಐಶ್ವರ್ಯ ಗೌಡ, ಅವಳ ಪತಿ ಹಾಗೂ ಮತ್ತಿತರರು ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

13 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

13 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

13 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

13 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

18 hours ago