Corruption

ಸಿದ್ದರಾಮಯ್ಯ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಟಾ ಬಯಲು!

ಬಿಟ್ಟಿ ಭಾಗ್ಯಗಳಿಗೆ ಪ್ರಖ್ಯಾತಿ ಪಡೆದಿದ್ದ ಕಾಂಗ್ರೆಸ್ ಸರ್ಕಾರ ಈಗ ವರ್ಗಾವಣೆ ಪದೋನ್ನತಿಯ ಭ್ರಷ್ಟಾಚಾರಗಳ ಕುರಿತು ಪ್ರಖ್ಯಾತಿ ಪಡೆಯುತ್ತಿದೆ. ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿಚಾರಗಳು ಇತ್ತೀಚಿಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ.

ಮತ್ತೊಂದು ಭ್ರಷ್ಟಾಚಾರ?
ಜನವರಿ-01-2025 ರಂದು ಅಬಕಾರಿ ಆಯುಕ್ತರು, 35 ಅಧಿಕಾರಿಗಳನ್ನು ಅಬಕಾರಿ ನಿರೀಕ್ಷಕರ ವೃಂದಕ್ಕೆ ಸ್ಥಾನಪನ್ನ ಪದೋನ್ನತಿ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿರುತ್ತಾರೆ. ಈ ಆದೇಶ ಹೊರಡಿಸಿದ ಮರುದಿನವೇ ಅಬಕಾರಿ ಆಯುಕ್ತರಾದ ರವಿಶಂಕರ್ ರವರ ವರ್ಗಾವಣೆಯಾಗಿದೆ. ದಿಡೀರನೆ ಈ ರೀತಿ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.


ಇದಕ್ಕೆಲ್ಲಾ ಕಾರಣ ಅಬಕಾರಿ ಮಂತ್ರಿಗಳಾದ ಬಿ.ಆರ್ ತಿಮ್ಮಾಪುರ ರವರು ಎಂಬ ಮಾತು ಇಲಾಖೆಯಲ್ಲೆಲ್ಲಾ ಓಡಾಡುತ್ತಿದೆ.

ಅಬಕಾರಿ ಮಂತ್ರಿ ತಿಮ್ಮಾಪುರರಿಗೆ ಪದೋನ್ನತಿ ವಿಚಾರದಲ್ಲಿ ಹಣ ದೋಚುವ ದುರಾಸೆಯೇ?
ಈ ಮಾತಿಗೆ ಪುಷ್ಟಿ ಕೊಡುವಂತೆ ಅಬಕಾರಿ ಅಧಿಕಾರಿಗಳಿಗೆ ಪದೋನ್ನತಿ ನೀಡಿ ಆದೇಶ ಹೊರಡಿಸಿದ ದಿನವೇ ಅದನ್ನು ತಡೆ ಹಿಡಿಯುವಂತೆ ಮಂತ್ರಿಗಳು ಹೇಳಿರುವ ಮಾಹಿತಿ ಲಭ್ಯವಾಗಿದ್ದು ಇದು ಯಾವ ಉದ್ದೇಶಕ್ಕೆ ಎಂಬುದರ ಸ್ಪಷ್ಟ ಮಾಹಿತಿಯನ್ನು ಹೊರಹಾಕಿರುವುದಿಲ್ಲ. ಮೂಲಗಳ ಪ್ರಕಾರ ಪದೋನ್ನತಿ ನೀಡುವ ವಿಚಾರದಲ್ಲಿ ಹಣ ಪಡೆದು ಬಡ್ತಿ ನೀಡಬೇಕೆಂಬ ಉದ್ದೇಶದಲ್ಲಿ ಮಂತ್ರಿಗಳಿದ್ದು, ಅದೇ ಉದ್ದೇಶದಿಂದ ಅಬಕಾರಿ ಆಯುಕ್ತ ರವಿಶಂಕರ್ ರವರು ನೀಡಿರುವ ಆದೇಶವನ್ನು ತಡೆಹಿಡಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವ್ಯವಹಾರದ ಜವಾಬ್ದಾರಿ ಹೊತ್ತಿದ್ದಾನ ಶೆಟ್ಟಿ?
ಪದೋನ್ನತಿ ಪಡೆದಿರುವ ಅಧಿಕಾರಿಗಳು ಮತ್ತು ಮಂತ್ರಿಗಳ ಮಧ್ಯೆ ಶೆಟ್ಟಿ ಎಂಬಾತ ಮಧ್ಯಸ್ಥಿಕೆ ವಹಿಸಿದ್ದು ಹಣದ ವಿಚಾರದಲ್ಲಿ ಹಲವು ಅಧಿಕಾರಿಗಳ ಮಧ್ಯೆ ಮಾತುಕತೆ ನಡೆಯುತ್ತಿದೆ ಎಂಬ ಮಾಹಿತಿಯು ಸಹ ಲಭ್ಯವಾಗಿದೆ.
ಪದೋನ್ನತಿ ಪಡೆದಿರುವ ಅಧಿಕಾರಿಗಳ ಪಟ್ಟಿಯಲ್ಲಿರುವ ಕೆಲವರು ಅಬಕಾರಿ ಆಯುಕ್ತರು ತುಂಬಾ ಒಳ್ಳೆಯವರು ಅವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಹೇಳಿದರೆ! ಇನ್ನೂ ಕೆಲವರು ಅವರು ಮಾಡಿರುವ ಕೆಲಸದಲ್ಲಿ ಹಣ ಮಾಡುವ ನಿಟ್ಟಿನಲ್ಲಿ ಮಂತ್ರಿಗಳು ಈಗ ಮಧ್ಯದಲ್ಲಿ ಬಂದಿದ್ದಾರೆ ಎಂಬ ಮಾತುಗಳನ್ನು ಸಹ ಆಡುತ್ತಿದ್ದಾರೆ.
ಇಲಾಖೆಯಲ್ಲಿ ಕೇಳಿಬರುತ್ತಿರುವ ಮಾತುಗಳಂತೆ ಅಬಕಾರಿ ಮಂತ್ರಿಗಳಾದ ತಿಮ್ಮಾಪುರ ರವರು ಪದೋನ್ನತಿ ವಿಚಾರದಲ್ಲಿ ಹಣ ಮಾಡಲು ಮುಂದಾಗಿದ್ದಾರಾ?

ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ವರ್ಗಾವಣೆ ಮತ್ತು ಪದೋನ್ನತಿಗಳಿಂದಲಾ?
ಇತ್ತೀಚಿಗೆ ವರ್ಗಾವಣೆಯ ವಿಚಾರಗಳಲ್ಲಿ ಲಕ್ಷಾಂತರ ರೂ ಹಣ ಪಡೆಯುತ್ತಿರುವ ಮಾಹಿತಿಗಳು ಹೊರಬಿದ್ದಿದ್ದು ಈಗ ಅಧಿಕಾರಿಗಳ ಪದೋನ್ನತಿ ವಿಚಾರದಲ್ಲೂ ಲಕ್ಷಾಂತರ ರೂ ಭ್ರಷ್ಟಾಚಾರ ನಡೆಯುತ್ತಿರುವ ಮಾಹಿತಿಗಳು ಲಭ್ಯವಾಗುತ್ತಿವೆ. ನಿಜಕ್ಕೂ ಇದು ಕಾಂಗ್ರೆಸ್ ಸರ್ಕಾರದ ಹಗಲು ದರೋಡೆಯೇ?
ಪದೋನ್ನತಿ ಪಡೆದಿರುವ ಪಟ್ಟಿಯಲ್ಲಿರುವ ಬಹುತೇಕ ಅಧಿಕಾರಿಗಳು ಅಲ್ಪಸಂಖ್ಯಾತರು, ಎಸ್.ಸಿ/ಎಸ್.ಟಿ ಹಾಗೂ ಹಿಂದುಳಿದ ವರ್ಗದವರಾಗಿರುತ್ತಾರೆ. ಅಹಿಂದ ನಾಯಕರಾದ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಹಿಂದ ದವರಿಂದಲೇ ಲೂಟಿ ಹೊಡೆಯುತ್ತಿರುವುದು ನೈತಿಕ ಅಧಃಪತನಕ್ಕಿಳಿದಿರುವುದಕ್ಕೆ ಸಾಕ್ಷಿಯಾಗಿದೆ.
ಮಾನ್ಯ ಮುಖ್ಯಮಂತ್ರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಪದೋನ್ನತಿ, ವರ್ಗಾವಣೆ ವಿಚಾರಗಳಲ್ಲಿ ಅಧಿಕಾರಿಗಳ ಬಳಿ ಹಣ ಪಡೆದರೆ ಅಧಿಕಾರಿಗಳು ಪುನಃ ಆ ಹಣವನ್ನು ಎಲ್ಲಿಂದ ಪಡೆಯುತ್ತಾರೇ? ಅಧಿಕಾರಿಗಳ ಬಳಿ ಹಣ ಪಡೆದು ಮಂತ್ರಿಗಳು ಭ್ರಷ್ಟಾಚಾರ ನಡೆಸಿದರೆ ಕೊಟ್ಟಿರುವ ಹಣವನ್ನು ಹಿಂಪಡೆಯಲು ಅಧಿಕಾರಿಗಳು ಮತ್ತೆ ಭ್ರಷ್ಟಾಚಾರ ಮಾಡಲು ಮುಂದಾಗುತ್ತಾರೆ. ಭ್ರಷ್ಟಾಚಾರ ತಡೆಯಬೇಕಾದ ಜಾಗದಲ್ಲಿ ಸರ್ಕಾರವೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಟ್ಟಂತಾಗಿದೆ. ಆದ್ದರಿಂದ ಭ್ರಷ್ಟ ಮಂತ್ರಿಯಾದ ಬಿ ಆರ್ ತಿಮ್ಮಾಪುರ ರವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ, ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಸಮಗ್ರ ತನಿಖೆ ನಡೆಸಿ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸರ್ಕಾರದ ಘನತೆಯನ್ನು ಎತ್ತಿ ಹಿಡಿಯಬೇಕೆಂದು ‘ಭ್ರಷ್ಟರ ಬೇಟೆ’ ಪತ್ರಿಕೆ ಆಗ್ರಹಿಸುತ್ತದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago