Corruption

ಸಿದ್ದರಾಮಯ್ಯ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಟಾ ಬಯಲು!

ಬಿಟ್ಟಿ ಭಾಗ್ಯಗಳಿಗೆ ಪ್ರಖ್ಯಾತಿ ಪಡೆದಿದ್ದ ಕಾಂಗ್ರೆಸ್ ಸರ್ಕಾರ ಈಗ ವರ್ಗಾವಣೆ ಪದೋನ್ನತಿಯ ಭ್ರಷ್ಟಾಚಾರಗಳ ಕುರಿತು ಪ್ರಖ್ಯಾತಿ ಪಡೆಯುತ್ತಿದೆ. ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿಚಾರಗಳು ಇತ್ತೀಚಿಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ.

ಮತ್ತೊಂದು ಭ್ರಷ್ಟಾಚಾರ?
ಜನವರಿ-01-2025 ರಂದು ಅಬಕಾರಿ ಆಯುಕ್ತರು, 35 ಅಧಿಕಾರಿಗಳನ್ನು ಅಬಕಾರಿ ನಿರೀಕ್ಷಕರ ವೃಂದಕ್ಕೆ ಸ್ಥಾನಪನ್ನ ಪದೋನ್ನತಿ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿರುತ್ತಾರೆ. ಈ ಆದೇಶ ಹೊರಡಿಸಿದ ಮರುದಿನವೇ ಅಬಕಾರಿ ಆಯುಕ್ತರಾದ ರವಿಶಂಕರ್ ರವರ ವರ್ಗಾವಣೆಯಾಗಿದೆ. ದಿಡೀರನೆ ಈ ರೀತಿ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.


ಇದಕ್ಕೆಲ್ಲಾ ಕಾರಣ ಅಬಕಾರಿ ಮಂತ್ರಿಗಳಾದ ಬಿ.ಆರ್ ತಿಮ್ಮಾಪುರ ರವರು ಎಂಬ ಮಾತು ಇಲಾಖೆಯಲ್ಲೆಲ್ಲಾ ಓಡಾಡುತ್ತಿದೆ.

ಅಬಕಾರಿ ಮಂತ್ರಿ ತಿಮ್ಮಾಪುರರಿಗೆ ಪದೋನ್ನತಿ ವಿಚಾರದಲ್ಲಿ ಹಣ ದೋಚುವ ದುರಾಸೆಯೇ?
ಈ ಮಾತಿಗೆ ಪುಷ್ಟಿ ಕೊಡುವಂತೆ ಅಬಕಾರಿ ಅಧಿಕಾರಿಗಳಿಗೆ ಪದೋನ್ನತಿ ನೀಡಿ ಆದೇಶ ಹೊರಡಿಸಿದ ದಿನವೇ ಅದನ್ನು ತಡೆ ಹಿಡಿಯುವಂತೆ ಮಂತ್ರಿಗಳು ಹೇಳಿರುವ ಮಾಹಿತಿ ಲಭ್ಯವಾಗಿದ್ದು ಇದು ಯಾವ ಉದ್ದೇಶಕ್ಕೆ ಎಂಬುದರ ಸ್ಪಷ್ಟ ಮಾಹಿತಿಯನ್ನು ಹೊರಹಾಕಿರುವುದಿಲ್ಲ. ಮೂಲಗಳ ಪ್ರಕಾರ ಪದೋನ್ನತಿ ನೀಡುವ ವಿಚಾರದಲ್ಲಿ ಹಣ ಪಡೆದು ಬಡ್ತಿ ನೀಡಬೇಕೆಂಬ ಉದ್ದೇಶದಲ್ಲಿ ಮಂತ್ರಿಗಳಿದ್ದು, ಅದೇ ಉದ್ದೇಶದಿಂದ ಅಬಕಾರಿ ಆಯುಕ್ತ ರವಿಶಂಕರ್ ರವರು ನೀಡಿರುವ ಆದೇಶವನ್ನು ತಡೆಹಿಡಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವ್ಯವಹಾರದ ಜವಾಬ್ದಾರಿ ಹೊತ್ತಿದ್ದಾನ ಶೆಟ್ಟಿ?
ಪದೋನ್ನತಿ ಪಡೆದಿರುವ ಅಧಿಕಾರಿಗಳು ಮತ್ತು ಮಂತ್ರಿಗಳ ಮಧ್ಯೆ ಶೆಟ್ಟಿ ಎಂಬಾತ ಮಧ್ಯಸ್ಥಿಕೆ ವಹಿಸಿದ್ದು ಹಣದ ವಿಚಾರದಲ್ಲಿ ಹಲವು ಅಧಿಕಾರಿಗಳ ಮಧ್ಯೆ ಮಾತುಕತೆ ನಡೆಯುತ್ತಿದೆ ಎಂಬ ಮಾಹಿತಿಯು ಸಹ ಲಭ್ಯವಾಗಿದೆ.
ಪದೋನ್ನತಿ ಪಡೆದಿರುವ ಅಧಿಕಾರಿಗಳ ಪಟ್ಟಿಯಲ್ಲಿರುವ ಕೆಲವರು ಅಬಕಾರಿ ಆಯುಕ್ತರು ತುಂಬಾ ಒಳ್ಳೆಯವರು ಅವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಹೇಳಿದರೆ! ಇನ್ನೂ ಕೆಲವರು ಅವರು ಮಾಡಿರುವ ಕೆಲಸದಲ್ಲಿ ಹಣ ಮಾಡುವ ನಿಟ್ಟಿನಲ್ಲಿ ಮಂತ್ರಿಗಳು ಈಗ ಮಧ್ಯದಲ್ಲಿ ಬಂದಿದ್ದಾರೆ ಎಂಬ ಮಾತುಗಳನ್ನು ಸಹ ಆಡುತ್ತಿದ್ದಾರೆ.
ಇಲಾಖೆಯಲ್ಲಿ ಕೇಳಿಬರುತ್ತಿರುವ ಮಾತುಗಳಂತೆ ಅಬಕಾರಿ ಮಂತ್ರಿಗಳಾದ ತಿಮ್ಮಾಪುರ ರವರು ಪದೋನ್ನತಿ ವಿಚಾರದಲ್ಲಿ ಹಣ ಮಾಡಲು ಮುಂದಾಗಿದ್ದಾರಾ?

ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ವರ್ಗಾವಣೆ ಮತ್ತು ಪದೋನ್ನತಿಗಳಿಂದಲಾ?
ಇತ್ತೀಚಿಗೆ ವರ್ಗಾವಣೆಯ ವಿಚಾರಗಳಲ್ಲಿ ಲಕ್ಷಾಂತರ ರೂ ಹಣ ಪಡೆಯುತ್ತಿರುವ ಮಾಹಿತಿಗಳು ಹೊರಬಿದ್ದಿದ್ದು ಈಗ ಅಧಿಕಾರಿಗಳ ಪದೋನ್ನತಿ ವಿಚಾರದಲ್ಲೂ ಲಕ್ಷಾಂತರ ರೂ ಭ್ರಷ್ಟಾಚಾರ ನಡೆಯುತ್ತಿರುವ ಮಾಹಿತಿಗಳು ಲಭ್ಯವಾಗುತ್ತಿವೆ. ನಿಜಕ್ಕೂ ಇದು ಕಾಂಗ್ರೆಸ್ ಸರ್ಕಾರದ ಹಗಲು ದರೋಡೆಯೇ?
ಪದೋನ್ನತಿ ಪಡೆದಿರುವ ಪಟ್ಟಿಯಲ್ಲಿರುವ ಬಹುತೇಕ ಅಧಿಕಾರಿಗಳು ಅಲ್ಪಸಂಖ್ಯಾತರು, ಎಸ್.ಸಿ/ಎಸ್.ಟಿ ಹಾಗೂ ಹಿಂದುಳಿದ ವರ್ಗದವರಾಗಿರುತ್ತಾರೆ. ಅಹಿಂದ ನಾಯಕರಾದ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಹಿಂದ ದವರಿಂದಲೇ ಲೂಟಿ ಹೊಡೆಯುತ್ತಿರುವುದು ನೈತಿಕ ಅಧಃಪತನಕ್ಕಿಳಿದಿರುವುದಕ್ಕೆ ಸಾಕ್ಷಿಯಾಗಿದೆ.
ಮಾನ್ಯ ಮುಖ್ಯಮಂತ್ರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಪದೋನ್ನತಿ, ವರ್ಗಾವಣೆ ವಿಚಾರಗಳಲ್ಲಿ ಅಧಿಕಾರಿಗಳ ಬಳಿ ಹಣ ಪಡೆದರೆ ಅಧಿಕಾರಿಗಳು ಪುನಃ ಆ ಹಣವನ್ನು ಎಲ್ಲಿಂದ ಪಡೆಯುತ್ತಾರೇ? ಅಧಿಕಾರಿಗಳ ಬಳಿ ಹಣ ಪಡೆದು ಮಂತ್ರಿಗಳು ಭ್ರಷ್ಟಾಚಾರ ನಡೆಸಿದರೆ ಕೊಟ್ಟಿರುವ ಹಣವನ್ನು ಹಿಂಪಡೆಯಲು ಅಧಿಕಾರಿಗಳು ಮತ್ತೆ ಭ್ರಷ್ಟಾಚಾರ ಮಾಡಲು ಮುಂದಾಗುತ್ತಾರೆ. ಭ್ರಷ್ಟಾಚಾರ ತಡೆಯಬೇಕಾದ ಜಾಗದಲ್ಲಿ ಸರ್ಕಾರವೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಟ್ಟಂತಾಗಿದೆ. ಆದ್ದರಿಂದ ಭ್ರಷ್ಟ ಮಂತ್ರಿಯಾದ ಬಿ ಆರ್ ತಿಮ್ಮಾಪುರ ರವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ, ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಸಮಗ್ರ ತನಿಖೆ ನಡೆಸಿ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸರ್ಕಾರದ ಘನತೆಯನ್ನು ಎತ್ತಿ ಹಿಡಿಯಬೇಕೆಂದು ‘ಭ್ರಷ್ಟರ ಬೇಟೆ’ ಪತ್ರಿಕೆ ಆಗ್ರಹಿಸುತ್ತದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago