ಬೆಂಗಳೂರು, ಏಪ್ರಿಲ್ 21: ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ವಾಹನ ಚಲಾವಣೆ ಸಂದರ್ಭದಲ್ಲಿ ಸಣ್ಣಪುಟ್ಟ ಮನಸ್ತಾಪಗಳು ಹಿಂಸಾತ್ಮಕ ಘಟನೆಗಳಿಗೆ ಕಾರಣವಾಗುತ್ತಿರುವ ದೃಶ್ಯಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ.
ಇತ್ತೀಚೆಗೆ ಜೆ.ಪಿ.ನಗರದ 8ನೇ ಹಂತದಲ್ಲಿ ಒಂದು road rage ಘಟನೆ ನಡಿತಿದ್ದು, ಆತಂಕ ಸೃಷ್ಟಿಸಿದೆ. ಮೂಲ ಮಾಹಿತಿಯ ಪ್ರಕಾರ, ಕಾರು ಚಾಲಕನು ಶಾಂತಿಯುತವಾಗಿ ತನ್ನ ದಾರಿಯಲ್ಲಿ ಸಾಗುತ್ತಿದ್ದ ವೇಳೆ, ಆತೋ ಚಾಲಕನು ಆತನಿಗೆ ಅಡ್ಡವಾಗಿ ನಿಲ್ಲಿಸಿ ಹಾರ್ನ್ ಹಾಕುತ್ತಾ ಕಿರಿಕಿರಿಯಾಗಿದ್ದ. ಕಾರು ಚಾಲಕ ಈ ಅಸಹನೀಯ ವರ್ತನೆಯ ಕುರಿತು ಪ್ರಶ್ನಿಸಿದಾಗ, ಆತೋ ಚಾಲಕನಿಂದ ಮಧ್ಯದ ಬೆರಳು ತೋರಿಸಿ ನಿಂದನೆಗೂ ಮುಂದಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಸಣ್ಣ ಮಾತು ತಕರಾರಾಗಿ ಬದಲಾಗಿದ ನಂತರ, ಆಟೋ ಚಾಲಕ ತನ್ನ ಗೆಳೆಯರೊಂದಿಗೆ ವಾಹನವನ್ನು ಅಡ್ಡಗಟ್ಟಿ ಮತ್ತಷ್ಟು ಗಲಾಟೆ ಸೃಷ್ಟಿಸುವ ಯತ್ನವನ್ನೂ ಮಾಡಿದ್ದ. ಘಟನೆಯ ತೀವ್ರತೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಕಾರು ಚಾಲಕ ತಕ್ಷಣ ಹೊಯ್ಸಳ ಪೊಲೀಸರಿಗೆ ಕರೆಮಾಡಿದ. ಆದರೆ ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆಟೋ ಚಾಲಕ ಹಾಗೂ ಆತನ ಜೊತೆಗಿದ್ದ ಯುವಕರು ಸ್ಥಳದಿಂದ ಪರಾರಿಯಾಗಿದ್ದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಮುಂದುವರೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ರಸ್ತೆ ಮೇಲೆ ಶಾಂತಿ ಕಾಪಾಡಿಕೊಳ್ಳಬೇಕು ಎಂಬ ಮನವಿ ಸಹ ಪೊಲೀಸ್ ಇಲಾಖೆ ಮಾಡಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…