ಬೆಂಗಳೂರು, ಏಪ್ರಿಲ್ 21: ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ವಾಹನ ಚಲಾವಣೆ ಸಂದರ್ಭದಲ್ಲಿ ಸಣ್ಣಪುಟ್ಟ ಮನಸ್ತಾಪಗಳು ಹಿಂಸಾತ್ಮಕ ಘಟನೆಗಳಿಗೆ ಕಾರಣವಾಗುತ್ತಿರುವ ದೃಶ್ಯಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ.
ಇತ್ತೀಚೆಗೆ ಜೆ.ಪಿ.ನಗರದ 8ನೇ ಹಂತದಲ್ಲಿ ಒಂದು road rage ಘಟನೆ ನಡಿತಿದ್ದು, ಆತಂಕ ಸೃಷ್ಟಿಸಿದೆ. ಮೂಲ ಮಾಹಿತಿಯ ಪ್ರಕಾರ, ಕಾರು ಚಾಲಕನು ಶಾಂತಿಯುತವಾಗಿ ತನ್ನ ದಾರಿಯಲ್ಲಿ ಸಾಗುತ್ತಿದ್ದ ವೇಳೆ, ಆತೋ ಚಾಲಕನು ಆತನಿಗೆ ಅಡ್ಡವಾಗಿ ನಿಲ್ಲಿಸಿ ಹಾರ್ನ್ ಹಾಕುತ್ತಾ ಕಿರಿಕಿರಿಯಾಗಿದ್ದ. ಕಾರು ಚಾಲಕ ಈ ಅಸಹನೀಯ ವರ್ತನೆಯ ಕುರಿತು ಪ್ರಶ್ನಿಸಿದಾಗ, ಆತೋ ಚಾಲಕನಿಂದ ಮಧ್ಯದ ಬೆರಳು ತೋರಿಸಿ ನಿಂದನೆಗೂ ಮುಂದಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಸಣ್ಣ ಮಾತು ತಕರಾರಾಗಿ ಬದಲಾಗಿದ ನಂತರ, ಆಟೋ ಚಾಲಕ ತನ್ನ ಗೆಳೆಯರೊಂದಿಗೆ ವಾಹನವನ್ನು ಅಡ್ಡಗಟ್ಟಿ ಮತ್ತಷ್ಟು ಗಲಾಟೆ ಸೃಷ್ಟಿಸುವ ಯತ್ನವನ್ನೂ ಮಾಡಿದ್ದ. ಘಟನೆಯ ತೀವ್ರತೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಕಾರು ಚಾಲಕ ತಕ್ಷಣ ಹೊಯ್ಸಳ ಪೊಲೀಸರಿಗೆ ಕರೆಮಾಡಿದ. ಆದರೆ ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆಟೋ ಚಾಲಕ ಹಾಗೂ ಆತನ ಜೊತೆಗಿದ್ದ ಯುವಕರು ಸ್ಥಳದಿಂದ ಪರಾರಿಯಾಗಿದ್ದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಮುಂದುವರೆಸಿದ್ದಾರೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ರಸ್ತೆ ಮೇಲೆ ಶಾಂತಿ ಕಾಪಾಡಿಕೊಳ್ಳಬೇಕು ಎಂಬ ಮನವಿ ಸಹ ಪೊಲೀಸ್ ಇಲಾಖೆ ಮಾಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…