Latest

ಐರ್ಲೆಂಡ್‌ನಲ್ಲಿ ಮತ್ತೊಂದು ಭಾರತೀಯರ ಮೇಲೆ ಹಿಂಸಾತ್ಮಕ ದಾಳಿ: ಶೆಫ್ ಲಕ್ಷ್ಮಣ್ ದಾಸ್ ಆಸ್ಪತ್ರೆಗೆ

ಐರ್ಲೆಂಡ್‌ನಲ್ಲಿ ಭಾರತೀಯ ಮೂಲದವರ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ದಾಳಿಗಳು ಆತಂಕ ಹೆಚ್ಚಿಸುತ್ತಿವೆ. ಕಳೆದ ವಾರ 6 ವರ್ಷದ ಬಾಲಕಿ ಮೇಲೆ ನಡೆದ ದಾಳಿಯ ನೆನಪು ಮಸುಕಾಗುವ ಮುನ್ನವೇ, ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಈ ಬಾರಿ, 22 ವರ್ಷಗಳಿಂದ ಐರ್ಲೆಂಡ್‌ನಲ್ಲಿ ವಾಸಿಸುತ್ತಿರುವ 51 ವರ್ಷದ ಲಕ್ಷ್ಮಣ್ ದಾಸ್ ಅವರನ್ನು ದುಷ್ಕರ್ಮಿಗಳು ಕ್ರೂರವಾಗಿ ಹಲ್ಲೆ ಮಾಡಿ ದರೋಡೆ ನಡೆಸಿದ್ದಾರೆ.

ಲಕ್ಷ್ಮಣ್ ದಾಸ್, ಐರಿಶ್ ಪ್ರಜೆಯಾಗಿರುವ ಅವರು, ಡಬ್ಲಿನ್‌ನ ಅನಂತರಾ ದಿ ಮಾರ್ಕರ್ ಹೋಟೆಲ್‌ನಲ್ಲಿ ಶೆಫ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಗಸ್ಟ್ 6ರ ಬೆಳಿಗ್ಗೆ, ತಮ್ಮ ಇ-ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮೂವರ ಗುಂಪೊಂದು ಅವರನ್ನು ಗುರಿಯಾಗಿಸಿಕೊಂಡಿತು. ದುಷ್ಕರ್ಮಿಗಳು ಮೊದಲು ಅವರ ದಾರಿಗೆ ಅಡ್ಡ ಬಂದು ಬಲಾತ್ಕಾರವಾಗಿ ಹಲ್ಲೆ ನಡೆಸಿ, ಹೆಲ್ಮೆಟ್ ಒಡೆದಿದ್ದಾರೆ. ಬಳಿಕ, ಅವರ ಫೋನ್, ಕ್ರೆಡಿಟ್ ಕಾರ್ಡ್, ನಗದು ಹಾಗೂ ಎಲೆಕ್ಟ್ರಿಕ್ ಬೈಕ್‌ನ್ನು ದೋಚಿ ಪರಾರಿಯಾಗಿದ್ದಾರೆ.

ಈ ದಾಳಿಯಿಂದ ದಾಸ್ ಅವರ ಕಾಲು, ಕಣ್ಣು, ಭುಜ ಮತ್ತು ತೋಳಿಗೆ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಸ್ತುತ ಅವರು ಚಿಕಿತ್ಸೆ ಪಡೆದು ಮನೆ ವಿಶ್ರಾಂತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಇದಕ್ಕೂ ಕೆಲವೇ ದಿನಗಳ ಹಿಂದೆ, ಆಗ್ನೇಯ ಐರ್ಲೆಂಡ್‌ನ ವಾಟರ್‌ಫೋರ್ಡ್ ನಗರದಲ್ಲಿ ವಾಸಿಸುತ್ತಿರುವ, ಕೇರಳ ಮೂಲದ ಅನುಪ ಅಚ್ಯುತನ್ ಅವರ ಆರು ವರ್ಷದ ಮಗಳು ನಿಯಾ ನವೀನ್ ಮೇಲೆ ಹಲ್ಲೆ ನಡೆದಿತ್ತು. ಆ ಸಂದರ್ಭದಲ್ಲಿ ಹಲ್ಲೆಗಾರರು “ಭಾರತಕ್ಕೆ ಹೋಗಿ” ಎಂದು ಕೂಗಿದ್ದರು.

ಈ ಎರಡೂ ಘಟನೆಗಳು ಸ್ಥಳೀಯ ಭಾರತೀಯ ಸಮುದಾಯದಲ್ಲಿ ಆತಂಕ ಹಾಗೂ ಅಸುರಕ್ಷತೆ ಮೂಡಿಸಿದ್ದು, ಐರ್ಲೆಂಡ್‌ನಲ್ಲಿ ವಾಸಿಸುವ ವಲಸಿಗರ ಸುರಕ್ಷತಾ ವಿಚಾರ ಮತ್ತೆ ಚರ್ಚೆಗೆ ಬಂದಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

19 minutes ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

20 minutes ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

11 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

11 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

11 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

11 hours ago