Categories: CorruptionLatest

₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ಎಪಿಪಿ ಲೋಕಾಯುಕ್ತ ಬಲೆಗೆ; ನಗದು ಜೊತೆಗೆ ಬಟ್ಟೆ, ಸೀರೆಗಳಿಗೂ ಬೇಡಿಕೆ ಆರೋಪ

ಕಲಬುರಗಿ: ಸಾವಿರಾರು ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ (ಎಪಿಪಿ) ಸಂತೋಷ್ ಕುಮಾರ ಲೋಖಂಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ರಾಹುಲ್ ಹೈದರಾಬಾದ್ ಎಂಬವರ ನ್ಯಾಯಾಲಯದ ಪ್ರಕರಣದಲ್ಲಿ ರಾಜಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಬಾಕಿ ಕೆಲಸ ಪೂರ್ಣಗೊಳಿಸುವುದಾಗಿ ಹೇಳಿ ಆರೋಪಿ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಅಲ್ಲದೆ, ನಗದು ಹಣದ ಜೊತೆಗೆ 9 ಸೀರೆಗಳು, 4 ಶರ್ಟ್‌ಗಳು, 4 ಜೀನ್ಸ್ ಪ್ಯಾಂಟ್‌ಗಳು, ಒಂದು ಜೋಡಿ ಶೂ, 4 ಮಹಿಳೆಯರ ಉಡುಪುಗಳು ಹಾಗೂ 6 ಜೋಡಿ ಮಹಿಳೆಯರ ಚಪ್ಪಲಿಗಳನ್ನು ನೀಡುವಂತೆಯೂ ಒತ್ತಾಯಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ದೂರು ದಾಖಲಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಅವರ ನೇತೃತ್ವದ ತಂಡ ನ್ಯಾಯಾಲಯ ಸಂಕೀರ್ಣದ ಸಮೀಪ ಬಲೆ ಬೀಸಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಆರೋಪಿ ₹10 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದರು.

ಆರೋಪಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಯ ಕುರಿತು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಜಿಂಕೆ ಮಾಂಸ ಪ್ರಕರಣದ ಪ್ರಮುಖ ಆರೋಪಿ ಬಂಧನ

ಮುಂಡಗೋಡ: ಅರಣ್ಯ ವಲಯದ ಇಂದೂರು ಶಾಖೆಯ ನಂದಿಕಟ್ಟ ಗಸ್ತು ವ್ಯಾಪ್ತಿಯಲ್ಲಿ ಜುಲೈ 17ರಂದು ಪತ್ತೆಯಾದ ಅಕ್ರಮ ಜಿಂಕೆ ಮಾಂಸ ಪ್ರಕರಣದ…

14 hours ago

ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ನಂಜನಗೂಡು: ಮೈಸೂರಿನ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ…

14 hours ago

ಲೊಕ್ಯಾಂಟೋದಲ್ಲಿ ಯುವತಿಯರ ಹೆಸರಿನಲ್ಲಿ ಬಲೆ: ಭೇಟಿಗೆ ಬಂದವರ ಅಪಹರಣ, ಸುಲಿಗೆ; 11 ಮಂದಿ ಬಂಧನ

ಬೆಂಗಳೂರು: ಆನ್‌ಲೈನ್‌ನಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಜಾಹೀರಾತುಗಳನ್ನು ಪ್ರಕಟಿಸಿ, ಭೇಟಿಗೆ ಬರುವ ವ್ಯಕ್ತಿಗಳನ್ನು ಅಪಹರಿಸಿ ಹಣ, ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು…

14 hours ago

ಗೌರಿಬಿದನೂರು ನಗರ ಠಾಣೆ ಪೊಲೀಸರು ಭರ್ಜರಿ ಬೇಟಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ

ಗೌರಿಬಿದನೂರು: ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ, ಸುಮಾರು ₹10 ಲಕ್ಷ ಬೆಲೆ ಬಾಳುವ 10 ದ್ವಿಚಕ್ರವಾಹನ, ₹67 ಸಾವಿರ…

14 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಏಳು ವರ್ಷದ ಮಗ: ಪ್ರಿಯಕರನ ಜೊತೆಗೂಡಿ ಕಿರುಬಾಲಕನ ಮೇಲೆ ಕ್ರೂರ ಹಲ್ಲೆ ಮಾಡಿದ ತಾಯಿ!

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ವಿ. ಕೋಟಾ ಮಂಡಲ ಕೇಂದ್ರದಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ…

21 hours ago

ಅತ್ತೆಯೊಂದಿಗೆ ಅಕ್ರಮ ಸಂಬಂಧ, ಮಗಳೊಂದಿಗೆ ಮದುವೆ… ತಿಂಗಳು ತುಂಬುವ ಮುನ್ನವೇ ಪತ್ನಿಯ ಕೊಲೆ; ಬೆಡ್‌ರೂಮ್‌ನಲ್ಲೇ ಶವ ಹೂತು ನಾಟಕವಾಡಿದ ಪತಿ!

ಅತ್ತೆಯೊಂದಿಗಿನ ಅಕ್ರಮ ಸಂಬಂಧ ಮುಂದುವರಿಸಲು ಮಗಳನ್ನೇ ವಿವಾಹವಾಗಿದ್ದ ಯುವಕ, ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿಯನ್ನು ಕೊಲೆ ಮಾಡಿ ಮನೆಯ ಬೆಡ್‌ರೂಮ್‌ನಲ್ಲೇ…

21 hours ago