ಭಾರತೀಯ ರೈಲ್ವೆ 7,951 ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಅಧಿಸೂಚನೆಯ ಮೂಲಕ ಸುಮಾರು 7,951 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ ಕೆಮಿಕಲ್ ಸೂಪರ್ವೈಸರ್ ಮತ್ತು ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್ / ರಿಸರ್ಚ್ – 13 ಹುದ್ದೆಗಳು ಸೇರಿವೆ. ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ – 7,934 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ
ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು. ಆಗ ಮಾತ್ರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಬಿಸಿಎ/ಬಿಟೆಕ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಪೂರ್ಣಗೊಳಿಸಿದವರು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯಸ್ಸು
ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಕನಿಷ್ಠ 18 ರಿಂದ ಗರಿಷ್ಠ 36 ವರ್ಷಗಳ ನಡುವೆ ಇರಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಸಂಬಳ
ಈ ಸರ್ಕಾರಿ ಕೆಲಸಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400 ರೂ. ಸರ್ಕಾರವು ನೀಡುವ ಇತರ ಪ್ರಯೋಜನಗಳು ಸಹ ಅನ್ವಯವಾಗುತ್ತವೆ.
ಶುಲ್ಕ
*ಒಬಿಸಿ – 500
*ಮಹಿಳೆಯರು ಮತ್ತು ಎಸ್ಸಿ / ಎಸ್ಟಿ – 250
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://www.rrbapply.gov.in/) ಹೆಸರು ನೋಂದಾಯಿಸಿ ಲಾಗಿನ್ ಆಗಿ. ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ. ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
ಹೆಚ್ಚಿನ ವಿವರಗಳಿಗೆ ವೆಬ್ಸೈಟ್ ವಿಳಾಸ: indianrailways.gov.in ಗೆ ಭೇಟಿ ನೀಡಿ ಅಥವಾ ಹೆಲ್ಪ್ಲೈನ್ ನಂಬರ್: 9592001188, 01725653333 ಕ್ಕೆ ಕರೆ ಮಾಡಿ.
ಪರೀಕ್ಷೆ ವಿಧಾನ
ಈ ಸರ್ಕಾರಿ ಉದ್ಯೋಗಗಳಿಗೆ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ ಮತ್ತು ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದವರಿಗೆ ಉದ್ಯೋಗ ನೀಡಲಾಗುವುದು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…