Latest

ಎಸ್ಪಿ ಸುಮನ್ ಪನ್ನೆಕರ್ ಸಿಐಡಿಗೆ ವರ್ಗಾವಣೆ,ಜಿಲ್ಲೆಯ ನೂತನ ಎಸ್ಪಿಯಾಗಿ ವಿಷ್ಣುವರ್ಧನ ನೇಮಕ…!

ಕಾರವಾರ: ಕಳೆದ ಒಂದು ವರ್ಷದ ಹಿಂದೆಯಷ್ಟೇ ಉತ್ತರ ಕನ್ನಡ‌ ಜಿಲ್ಲೆಗೆ ಆಗಮಿಸಿ ತಮ್ಮ ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಕೆಲಸಗಳನ್ನು ಮಾಡುತ್ತಾ ಜಿಲ್ಲೆಯಲ್ಲಿನ ಮಟ್ಕಾದಂತಹ ಅದೆಷ್ಟೋ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕಿದ್ದರು.ಹೀಗಾಗಿ ಇವರನ್ನು ಜಿಲ್ಲೆಯ ಜನರು ದಕ್ಷ ಎಸ್ಪಿ ಎಂದೆ ಕರೆಯುತ್ತಿದ್ದರು.ಯಾವಾಗ ಈ ಅಧಿಕಾರಿ ಭ್ರಷ್ಟರ ಮಾತುಗಳಿಗೆ ಬೆಲೆ ಕೊಡದೆ ಕೆಲಸ ಮಾಡಲು ಪ್ರಾರಂಭಿಸಿದರೋ ಅಂದಿನಿಂದಲೇ ಇವರ ವರ್ಗಾವಣೆಗೆ ಸ್ಕೆಚ್ಅನ್ನು ಹಾಕಿದ್ದರು ಎನ್ನಲಾಗಿದೆ.ಕಳೆದ ಎರಡು ತಿಂಗಳ ಹಿಂದೆಯೇ ಎಸ್ ಪಿ ಮೇಡಂ ಅವರ ವರ್ಗಾವಣೆಯ ಮಾತುಗಳು ಕೇಳಿ ಬಂದಿದ್ದವು ಆಗ ಜಿಲ್ಲೆಯ ಅದಷ್ಟೋ ಶುದ್ಧ ಮನಸ್ಸುಗಳು ಸಾಮಾಜಿಕ ಜಾಲತಾಣಗಳ ಮೂಲಕ ಎಸ್ ಪಿ ಮೇಡಂ ಅವರನ್ನು ವರ್ಗಾವಣೆ ಮಾಡದಂತೆ ಆಕ್ರೋಶವನ್ನೂ ಸಹ ಹೊರಹಾಕಿದ್ದವು.
ತಮ್ಮ ಇಲಾಖೆಯಲ್ಲಿಯೇ ಇರುವ ಕೆಲವು ಅಧಿಕಾರಿಗಳು ಇವರ ಕಾರ್ಯವೈಕರಿಯ ಬಗ್ಗೆ ಒಳಗೊಳಗೆ ಕೈ ಹಿಸುಕಿಕೊಳ್ಳುವಂತಾಗಿತ್ತು ಮತ್ತು ಅಕ್ರಮ ದಂದೇಕೋರರು ಈ ಅಧಿಕಾರಿ ಯಾವಾಗ ಹೋಗುತ್ತಾರೆಯೋ ಮಾರಾಯ ಎಂಬ ಮಾತುಗಳನ್ನು ಆಡುತ್ತಾ ಎಸ್ ಪಿ ಮೇಡಂ ಅವರ ದಕ್ಷತೆಗೆ ಬೆಚ್ಚಿಬಿದ್ದಿದ್ದರು.
ಅದೇನೆ ಇರಲಿ ಸರ್ಕಾರ ದಕ್ಷ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ಕೊಡುತ್ತಾ ಒಳ್ಳೆಯ ಆಡಳಿತವನ್ನು ನಡೆಸುವಲ್ಲಿ ಸಹಕಾರವನ್ನು ಕೊಡಬೇಕಿತ್ತು ಆದರೆ ರಾಜ್ಯದಲ್ಲಿಯೇ ಇವರೊಬ್ಬರ ವರ್ಗಾವಣೆ ಆದೇಶವನ್ನು ಮಾಡಿರುವುದು ದಕ್ಷ ಅಧಿಕಾರಿಗಳಿಗೆ ಬೆಲೆ ಇಲ್ಲ ಎನ್ನುವುದು ಸಾಬೀತಾಗಿದೆ.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

11 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago