ಕಾರವಾರ: ಕಳೆದ ಒಂದು ವರ್ಷದ ಹಿಂದೆಯಷ್ಟೇ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿ ತಮ್ಮ ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಕೆಲಸಗಳನ್ನು ಮಾಡುತ್ತಾ ಜಿಲ್ಲೆಯಲ್ಲಿನ ಮಟ್ಕಾದಂತಹ ಅದೆಷ್ಟೋ ಅಕ್ರಮ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕಿದ್ದರು.ಹೀಗಾಗಿ ಇವರನ್ನು ಜಿಲ್ಲೆಯ ಜನರು ದಕ್ಷ ಎಸ್ಪಿ ಎಂದೆ ಕರೆಯುತ್ತಿದ್ದರು.ಯಾವಾಗ ಈ ಅಧಿಕಾರಿ ಭ್ರಷ್ಟರ ಮಾತುಗಳಿಗೆ ಬೆಲೆ ಕೊಡದೆ ಕೆಲಸ ಮಾಡಲು ಪ್ರಾರಂಭಿಸಿದರೋ ಅಂದಿನಿಂದಲೇ ಇವರ ವರ್ಗಾವಣೆಗೆ ಸ್ಕೆಚ್ಅನ್ನು ಹಾಕಿದ್ದರು ಎನ್ನಲಾಗಿದೆ.ಕಳೆದ ಎರಡು ತಿಂಗಳ ಹಿಂದೆಯೇ ಎಸ್ ಪಿ ಮೇಡಂ ಅವರ ವರ್ಗಾವಣೆಯ ಮಾತುಗಳು ಕೇಳಿ ಬಂದಿದ್ದವು ಆಗ ಜಿಲ್ಲೆಯ ಅದಷ್ಟೋ ಶುದ್ಧ ಮನಸ್ಸುಗಳು ಸಾಮಾಜಿಕ ಜಾಲತಾಣಗಳ ಮೂಲಕ ಎಸ್ ಪಿ ಮೇಡಂ ಅವರನ್ನು ವರ್ಗಾವಣೆ ಮಾಡದಂತೆ ಆಕ್ರೋಶವನ್ನೂ ಸಹ ಹೊರಹಾಕಿದ್ದವು.
ತಮ್ಮ ಇಲಾಖೆಯಲ್ಲಿಯೇ ಇರುವ ಕೆಲವು ಅಧಿಕಾರಿಗಳು ಇವರ ಕಾರ್ಯವೈಕರಿಯ ಬಗ್ಗೆ ಒಳಗೊಳಗೆ ಕೈ ಹಿಸುಕಿಕೊಳ್ಳುವಂತಾಗಿತ್ತು ಮತ್ತು ಅಕ್ರಮ ದಂದೇಕೋರರು ಈ ಅಧಿಕಾರಿ ಯಾವಾಗ ಹೋಗುತ್ತಾರೆಯೋ ಮಾರಾಯ ಎಂಬ ಮಾತುಗಳನ್ನು ಆಡುತ್ತಾ ಎಸ್ ಪಿ ಮೇಡಂ ಅವರ ದಕ್ಷತೆಗೆ ಬೆಚ್ಚಿಬಿದ್ದಿದ್ದರು.
ಅದೇನೆ ಇರಲಿ ಸರ್ಕಾರ ದಕ್ಷ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲ ಕೊಡುತ್ತಾ ಒಳ್ಳೆಯ ಆಡಳಿತವನ್ನು ನಡೆಸುವಲ್ಲಿ ಸಹಕಾರವನ್ನು ಕೊಡಬೇಕಿತ್ತು ಆದರೆ ರಾಜ್ಯದಲ್ಲಿಯೇ ಇವರೊಬ್ಬರ ವರ್ಗಾವಣೆ ಆದೇಶವನ್ನು ಮಾಡಿರುವುದು ದಕ್ಷ ಅಧಿಕಾರಿಗಳಿಗೆ ಬೆಲೆ ಇಲ್ಲ ಎನ್ನುವುದು ಸಾಬೀತಾಗಿದೆ.
ವರದಿ:ಮಂಜುನಾಥ ಹರಿಜನ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…