Categories: Latest

ಅಕ್ರಮವಾಗಿ ಗಾಂಜಾ ಸಾಗಣೆ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ.

ಕೋಲಾರ ಗ್ರಾಮಾಂತರ ಪೊಲೀಸರಿಗೆ ಬಾತ್ಮಿದಾರರದಿಂದ ಬಂದ ಮಾಹಿತಿ ಮೇರೆಗೆ , ಕೋಲಾರ – ಶ್ರೀನಿವಾಸಪುರ ರಸ್ತೆಯಲ್ಲಿರುವ ಮಹರ್ಷಿ ಶಾಲೆಯ ಮುಂಭಾಗ ಒಬ್ಬ ವ್ಯಕ್ತಿಯು ಬ್ಯಾಗನ್ನು ಟಿ.ವಿಎಸ್. XL 100. ಸಂಖ್ಯೆ AP 03 BZ 0930 ದ್ವಿಚಕ್ರ ವಾಹನದಲ್ಲಿ ಗಂಜಾ ಇಟ್ಟುಕೊಂಡಿರುವುದು ಕಂಡು ಬಂದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆಸಾಮಿಯನ್ನ ವಶಕ್ಕೆ ಪಡೆದು ಅವನ ಹೆಸರು ಮತ್ತು ವಿಳಾಸ ವಿಚಾರಿಸಿದಾಗ ಶ್ರೀನಿವಾಸ ಅಲಿಯಾಸ್ ಶ್ರೀನಿವಾಸಲು ಬಿನ್ ಹನುಮಂತಪ್ಪ ವಯಸ್ಸು 45 ವರ್ಷ, ವಾಸ ಬಾಗೇಪಲ್ಲಿ ಗ್ರಾಮ ಪುಂಗನೂರು ತಾಲ್ಲೂಕು, ಎಂದು ತನ್ನ ಬಳಿ ಇದ್ದ ಗಾಂಜಾವನ್ನು ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ್ದಾನೆ. ಪರಿಶೀಲನೆ ಮಾಡಿದಾಗ ಒಂದು ಪೇಪರ್ ನಲ್ಲಿ ಅಂದಾಜು 1,50, 000/- ಸಾವಿರ ರೂ ಬೆಳೆ ಬಾಳುವ ಗಾಂಜಾ ಹಾಗೂ ಡಿಜಿಟಲ್ ಮಾಪನ ಇರುವುದು ಪತ್ತೆಯಾಗಿದೆ, ಅರೋಪಿ ಮತ್ತು ಮಾಲು ಹಾಗೂ TVS XL100 ದ್ವಿಚಕ್ರ ವಾಹನವನ್ನು ಪೋಲಿಸರು ವಶಕ್ಕೆ ಪಡೆದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖೀಲ್ ಬಿ ಐಪಿಎಸ್‌ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಶ್ರವಿಶಂಕರ್ ಮತ್ತು ಶ್ಜಗದೀಶ್ ರವರ ಮಾರ್ಗದರ್ಶನದಲ್ಲಿ ಎಂ.ಹೆಚ್. ನಾಗ್ತೆ ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪ ವಿಭಾಗ ರವರ ನೇತೃತ್ವದಲ್ಲಿ ಪಿ.ಐ ಕಾಂತ್ ರಾಜ್ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ರವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಷನ್ ಜಮೀರ್

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago