ಕೋಲಾರ ಗ್ರಾಮಾಂತರ ಪೊಲೀಸರಿಗೆ ಬಾತ್ಮಿದಾರರದಿಂದ ಬಂದ ಮಾಹಿತಿ ಮೇರೆಗೆ , ಕೋಲಾರ – ಶ್ರೀನಿವಾಸಪುರ ರಸ್ತೆಯಲ್ಲಿರುವ ಮಹರ್ಷಿ ಶಾಲೆಯ ಮುಂಭಾಗ ಒಬ್ಬ ವ್ಯಕ್ತಿಯು ಬ್ಯಾಗನ್ನು ಟಿ.ವಿಎಸ್. XL 100. ಸಂಖ್ಯೆ AP 03 BZ 0930 ದ್ವಿಚಕ್ರ ವಾಹನದಲ್ಲಿ ಗಂಜಾ ಇಟ್ಟುಕೊಂಡಿರುವುದು ಕಂಡು ಬಂದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆಸಾಮಿಯನ್ನ ವಶಕ್ಕೆ ಪಡೆದು ಅವನ ಹೆಸರು ಮತ್ತು ವಿಳಾಸ ವಿಚಾರಿಸಿದಾಗ ಶ್ರೀನಿವಾಸ ಅಲಿಯಾಸ್ ಶ್ರೀನಿವಾಸಲು ಬಿನ್ ಹನುಮಂತಪ್ಪ ವಯಸ್ಸು 45 ವರ್ಷ, ವಾಸ ಬಾಗೇಪಲ್ಲಿ ಗ್ರಾಮ ಪುಂಗನೂರು ತಾಲ್ಲೂಕು, ಎಂದು ತನ್ನ ಬಳಿ ಇದ್ದ ಗಾಂಜಾವನ್ನು ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ್ದಾನೆ. ಪರಿಶೀಲನೆ ಮಾಡಿದಾಗ ಒಂದು ಪೇಪರ್ ನಲ್ಲಿ ಅಂದಾಜು 1,50, 000/- ಸಾವಿರ ರೂ ಬೆಳೆ ಬಾಳುವ ಗಾಂಜಾ ಹಾಗೂ ಡಿಜಿಟಲ್ ಮಾಪನ ಇರುವುದು ಪತ್ತೆಯಾಗಿದೆ, ಅರೋಪಿ ಮತ್ತು ಮಾಲು ಹಾಗೂ TVS XL100 ದ್ವಿಚಕ್ರ ವಾಹನವನ್ನು ಪೋಲಿಸರು ವಶಕ್ಕೆ ಪಡೆದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖೀಲ್ ಬಿ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಶ್ರವಿಶಂಕರ್ ಮತ್ತು ಶ್ಜಗದೀಶ್ ರವರ ಮಾರ್ಗದರ್ಶನದಲ್ಲಿ ಎಂ.ಹೆಚ್. ನಾಗ್ತೆ ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪ ವಿಭಾಗ ರವರ ನೇತೃತ್ವದಲ್ಲಿ ಪಿ.ಐ ಕಾಂತ್ ರಾಜ್ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ರವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಷನ್ ಜಮೀರ್
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…