Categories: Latest

ಅಕ್ರಮವಾಗಿ ಗಾಂಜಾ ಸಾಗಣೆ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ.

ಕೋಲಾರ ಗ್ರಾಮಾಂತರ ಪೊಲೀಸರಿಗೆ ಬಾತ್ಮಿದಾರರದಿಂದ ಬಂದ ಮಾಹಿತಿ ಮೇರೆಗೆ , ಕೋಲಾರ – ಶ್ರೀನಿವಾಸಪುರ ರಸ್ತೆಯಲ್ಲಿರುವ ಮಹರ್ಷಿ ಶಾಲೆಯ ಮುಂಭಾಗ ಒಬ್ಬ ವ್ಯಕ್ತಿಯು ಬ್ಯಾಗನ್ನು ಟಿ.ವಿಎಸ್. XL 100. ಸಂಖ್ಯೆ AP 03 BZ 0930 ದ್ವಿಚಕ್ರ ವಾಹನದಲ್ಲಿ ಗಂಜಾ ಇಟ್ಟುಕೊಂಡಿರುವುದು ಕಂಡು ಬಂದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆಸಾಮಿಯನ್ನ ವಶಕ್ಕೆ ಪಡೆದು ಅವನ ಹೆಸರು ಮತ್ತು ವಿಳಾಸ ವಿಚಾರಿಸಿದಾಗ ಶ್ರೀನಿವಾಸ ಅಲಿಯಾಸ್ ಶ್ರೀನಿವಾಸಲು ಬಿನ್ ಹನುಮಂತಪ್ಪ ವಯಸ್ಸು 45 ವರ್ಷ, ವಾಸ ಬಾಗೇಪಲ್ಲಿ ಗ್ರಾಮ ಪುಂಗನೂರು ತಾಲ್ಲೂಕು, ಎಂದು ತನ್ನ ಬಳಿ ಇದ್ದ ಗಾಂಜಾವನ್ನು ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ್ದಾನೆ. ಪರಿಶೀಲನೆ ಮಾಡಿದಾಗ ಒಂದು ಪೇಪರ್ ನಲ್ಲಿ ಅಂದಾಜು 1,50, 000/- ಸಾವಿರ ರೂ ಬೆಳೆ ಬಾಳುವ ಗಾಂಜಾ ಹಾಗೂ ಡಿಜಿಟಲ್ ಮಾಪನ ಇರುವುದು ಪತ್ತೆಯಾಗಿದೆ, ಅರೋಪಿ ಮತ್ತು ಮಾಲು ಹಾಗೂ TVS XL100 ದ್ವಿಚಕ್ರ ವಾಹನವನ್ನು ಪೋಲಿಸರು ವಶಕ್ಕೆ ಪಡೆದು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖೀಲ್ ಬಿ ಐಪಿಎಸ್‌ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಶ್ರವಿಶಂಕರ್ ಮತ್ತು ಶ್ಜಗದೀಶ್ ರವರ ಮಾರ್ಗದರ್ಶನದಲ್ಲಿ ಎಂ.ಹೆಚ್. ನಾಗ್ತೆ ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪ ವಿಭಾಗ ರವರ ನೇತೃತ್ವದಲ್ಲಿ ಪಿ.ಐ ಕಾಂತ್ ರಾಜ್ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ರವರು ಈ ದಾಳಿಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಷನ್ ಜಮೀರ್

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

13 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

13 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago