ಭಟ್ಕಳ: ಗೋ ಕಳ್ಳತನವೂ ಸೇರಿ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ಫಾರುಕ್ ಭೋಗಿಬಾಷಾ ಎಂಬಾತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಿರಾಳಕೊಪ್ಪದ ಹಳ್ಳೂರುಕೇರಿಯ ಪಾರುಕ್ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿ ಕಳ್ಳತನ ನಡೆಸುತ್ತಿದ್ದ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣವನ್ನು ಆತ ಎದುರಿಸುತ್ತಿದ್ದ. ಇದರೊಂದಿಗೆ ಸಿದ್ದಾಪುರದಲ್ಲಿ ದೇವಾಲಯ ದರೋಡೆ ಸೇರಿ ಶಿವಮೊಗ್ಗ-ಸೊರಬ ಪೊಲೀಸ್ ಠಾಣೆಗಳಲ್ಲಿಯೂ ಆತನ ವಿರುದ್ಧ ದೂರುಗಳು ದಾಖಲಾಗಿದ್ದವು.ಈ ಫಾರುಕ್ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಸಹ ಆಗಿತ್ತು. ಆದರೂ, ಆತ ಸಿಕ್ಕಿರಲಿಲ್ಲ. 15ಕ್ಕೂ ಅಧಿಕ ಪ್ರಕರಣಗಳು ಆತನ ಮೇಲಿರುವುದರಿಂದ ಪೊಲೀಸರು ತಂಡ ರಚಿಸಿಕೊಂಡು ಹುಡುಕಾಟ ನಡೆಸಿದ್ದರು. ಹೀಗಾಗಿ ಆತ ಇದೀಗ ಸಿಕ್ಕಿ ಬಿದ್ದಿದ್ದು, ನ್ಯಾಯಾಲಯ ಆತನ ಪ್ರಕರಣಗಳ ವಿಚಾರಣೆ ನಡೆಸಿದೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…