ಭಟ್ಕಳ: ಗೋ ಕಳ್ಳತನವೂ ಸೇರಿ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ಫಾರುಕ್ ಭೋಗಿಬಾಷಾ ಎಂಬಾತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಶಿರಾಳಕೊಪ್ಪದ ಹಳ್ಳೂರುಕೇರಿಯ ಪಾರುಕ್ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿ ಕಳ್ಳತನ ನಡೆಸುತ್ತಿದ್ದ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣವನ್ನು ಆತ ಎದುರಿಸುತ್ತಿದ್ದ. ಇದರೊಂದಿಗೆ ಸಿದ್ದಾಪುರದಲ್ಲಿ ದೇವಾಲಯ ದರೋಡೆ ಸೇರಿ ಶಿವಮೊಗ್ಗ-ಸೊರಬ ಪೊಲೀಸ್ ಠಾಣೆಗಳಲ್ಲಿಯೂ ಆತನ ವಿರುದ್ಧ ದೂರುಗಳು ದಾಖಲಾಗಿದ್ದವು.ಈ ಫಾರುಕ್ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಸಹ ಆಗಿತ್ತು. ಆದರೂ, ಆತ ಸಿಕ್ಕಿರಲಿಲ್ಲ. 15ಕ್ಕೂ ಅಧಿಕ ಪ್ರಕರಣಗಳು ಆತನ ಮೇಲಿರುವುದರಿಂದ ಪೊಲೀಸರು ತಂಡ ರಚಿಸಿಕೊಂಡು ಹುಡುಕಾಟ ನಡೆಸಿದ್ದರು. ಹೀಗಾಗಿ ಆತ ಇದೀಗ ಸಿಕ್ಕಿ ಬಿದ್ದಿದ್ದು, ನ್ಯಾಯಾಲಯ ಆತನ ಪ್ರಕರಣಗಳ ವಿಚಾರಣೆ ನಡೆಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…