Latest

ಲಾರಿ ತಡೆದು ದರೋಡೆ ಮಾಡಿದ್ದ ಐದು ಜನ ಆರೋಪಿಗಳ ಬಂಧನ

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲುಕು ಕಾಮಸಮುದ್ರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಜೂನ್​-18 ರಂದು ಬಂಗಾರಪೇಟೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ತಡೆದು ಡ್ರೈವರ್ ರಾಮಕೃಷ್ಣ ಎಂಬುವನ​ ಮೇಲೆ ಹಲ್ಲೆ ಮಾಡಿ, 4.34 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪಿಗಳು ಟೊಯೋಟೊ ಇಟಿಯಸ್ ಕಾರ್​ನಲ್ಲಿ ಬಂದು ದರೋಡೆ ಮಾಡಿದ್ದ ಆರೋಪಿಗಳು ಬಂದಿತರಿಂದ ಒಂದು ಕಾರು, ಎರಡು ಬೈಕ್​, ಐದು ಮೊಬೈಲ್​, 4.34 ಲಕ್ಷರೂ ನಗದು ವಶಕ್ಕೆ. ತಮಿಳುನಾಡು ಮೂಲದ ನಾಗೇಶ್​ (25), ಸೈಯ್ಯದ್​ ಪಾಷಾ (27), ಜಬೀಉಲ್ಲಾ (25) ಸದ್ದಾಂಹಸೇನ್​(23), ಚಿನ್ನಸ್ವಾಮಿ(29) ಬಂದಿತ ಆರೋಪಿಗಳು, ಮತ್ತಿಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು. ಕಾಮಸಮುದ್ರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ. ಬಂಧಿತರಿಂದ 5 ಲಕ್ಷ ಮೌಲ್ಯದ ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನ, ಸುಮಾರು 50 ಸಾವಿರ ಮೌಲ್ಯದ 4 ಮೊಬೈಲ್ ಪೋನುಗಳು ಮತ್ತು 311000 ನಗದು ವಶಪಡಿಸಿಕೊಳ್ಳಲಾಗಿದೆ ಸಿಬ್ಬಂದಿಗಳಾದ- ಇನ್ಸ್ ಪೆಕ್ಟರ್ ಆನಂದ್ ಸಬ್ ಇನ್ಸ್ ಪೆಕ್ಟರ್ ವಿಠಲ್ ತಲ್ವಾರ್ ASI ವೆಂಕಟರಾಮಪ್ಪ ಮಂಜುನಾಥ್, ಲಕ್ಷ್ಮಣ್ ತೇಲಿ, ಶಿವಕುಮಾರ್, ಕೃಷ್ಣ , ರಾಮರಾವ್.

ವರದಿ – ರೋಶನ್

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago