ಕುಮಟಾ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ ಒಂದುವರೆ ಕೆಜಿ ಗಾಂಜಾ ಹಾಗೂ ಸ್ಕೂಟಿ ವಶಕ್ಕೆ ಪಡೆದ ಘಟನೆ ಕುಮಟಾದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.
ಒರಿಸ್ಸಾ ಮೂಲದ ರಾಕೇಶ್ ಕುಮಾರ ದಾಸ ಬಂಧಿತ ಆರೋಪಿಯಾಗಿದ್ದಾನೆ.ಬಂದಿತ ಆರೋಪಿಯಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ 1ಕೆಜಿ 500 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದ ಬಗ್ಗೆ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಸುಮನ್ ಪನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀ ಬದರಿನಾಥ್ ಹಾಗೂ ಹಾಗೂ ಭಟ್ಕಳ ಉಪವಿಭಾಗದ ಡಿ,ವೈ,ಎಸ್ ,ಪಿ ಬೆಳ್ಳಿಯಪ್ಪ ರವರುಗಳ ಮಾರ್ಗದರ್ಶನದಲ್ಲಿ ಶ್ರೀ ತಿಮ್ಮಪ್ಪ ನಾಯಕ್ ಸಿಪಿಐ ಕುಮಟಾ, ಹಾಗೂ ನವೀನ್ ನಾಯಕ್ ಪಿಎಸ್ಐ ಕುಮಟಾ ಅವರನ್ನು ಒಳಗೊಂಡ ತಂಡ ದಾಳಿ ಮಾಡಿ ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ರವಿ ಗುಡ್ಡಿ ಪಿಎಸ್ಐ, ಪದ್ಮಾ ದೇವಳಿ ಪಿಎಸ್ಐ, ಚಂದ್ರಮತಿ ಪಟಗಾರ ಪಿಎಸ್ಐ, ಸಿಬ್ಬಂದಿಗಳಾದ ಗಣೇಶ್ ನಾಯ್ಕ,ದಯಾನಂದ್ ನಾಯ್ಕ,ರಾಜು ನಾಯ್ಕ,ಆಸೀಫ್ ಆರ್ ಕೆ, ಗುರು ನಾಯಕ್, ಶಿವಾನಂದ ಜಾಡರ್, ಮಂಜುನಾಥ,ಪ್ರದೀಪ್ ನಾಯಕ್,ಧನಂಜಯ್ ಪಟಗಾರ,ಸಂಜೀವ ನಾಯ್ಕ್ ಭಾಗವಹಿಸಿದ್ದರು .
ವರದಿ :ಮಂಜುನಾಥ ಹರಿಜನ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…