ಕುಮಟಾ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ ಒಂದುವರೆ ಕೆಜಿ ಗಾಂಜಾ ಹಾಗೂ ಸ್ಕೂಟಿ ವಶಕ್ಕೆ ಪಡೆದ ಘಟನೆ ಕುಮಟಾದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.
ಒರಿಸ್ಸಾ ಮೂಲದ ರಾಕೇಶ್ ಕುಮಾರ ದಾಸ ಬಂಧಿತ ಆರೋಪಿಯಾಗಿದ್ದಾನೆ.ಬಂದಿತ ಆರೋಪಿಯಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ 1ಕೆಜಿ 500 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದ ಬಗ್ಗೆ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಸುಮನ್ ಪನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀ ಬದರಿನಾಥ್ ಹಾಗೂ ಹಾಗೂ ಭಟ್ಕಳ ಉಪವಿಭಾಗದ ಡಿ,ವೈ,ಎಸ್ ,ಪಿ ಬೆಳ್ಳಿಯಪ್ಪ ರವರುಗಳ ಮಾರ್ಗದರ್ಶನದಲ್ಲಿ ಶ್ರೀ ತಿಮ್ಮಪ್ಪ ನಾಯಕ್ ಸಿಪಿಐ ಕುಮಟಾ, ಹಾಗೂ ನವೀನ್ ನಾಯಕ್ ಪಿಎಸ್ಐ ಕುಮಟಾ ಅವರನ್ನು ಒಳಗೊಂಡ ತಂಡ ದಾಳಿ ಮಾಡಿ ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ರವಿ ಗುಡ್ಡಿ ಪಿಎಸ್ಐ, ಪದ್ಮಾ ದೇವಳಿ ಪಿಎಸ್ಐ, ಚಂದ್ರಮತಿ ಪಟಗಾರ ಪಿಎಸ್ಐ, ಸಿಬ್ಬಂದಿಗಳಾದ ಗಣೇಶ್ ನಾಯ್ಕ,ದಯಾನಂದ್ ನಾಯ್ಕ,ರಾಜು ನಾಯ್ಕ,ಆಸೀಫ್ ಆರ್ ಕೆ, ಗುರು ನಾಯಕ್, ಶಿವಾನಂದ ಜಾಡರ್, ಮಂಜುನಾಥ,ಪ್ರದೀಪ್ ನಾಯಕ್,ಧನಂಜಯ್ ಪಟಗಾರ,ಸಂಜೀವ ನಾಯ್ಕ್ ಭಾಗವಹಿಸಿದ್ದರು .
ವರದಿ :ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…