ಕುಮಟಾ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ ಒಂದುವರೆ ಕೆಜಿ ಗಾಂಜಾ ಹಾಗೂ ಸ್ಕೂಟಿ ವಶಕ್ಕೆ ಪಡೆದ ಘಟನೆ ಕುಮಟಾದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ನಡೆದಿದೆ.
ಒರಿಸ್ಸಾ ಮೂಲದ ರಾಕೇಶ್ ಕುಮಾರ ದಾಸ ಬಂಧಿತ ಆರೋಪಿಯಾಗಿದ್ದಾನೆ.ಬಂದಿತ ಆರೋಪಿಯಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ 1ಕೆಜಿ 500 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದ ಬಗ್ಗೆ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಸುಮನ್ ಪನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀ ಬದರಿನಾಥ್ ಹಾಗೂ ಹಾಗೂ ಭಟ್ಕಳ ಉಪವಿಭಾಗದ ಡಿ,ವೈ,ಎಸ್ ,ಪಿ ಬೆಳ್ಳಿಯಪ್ಪ ರವರುಗಳ ಮಾರ್ಗದರ್ಶನದಲ್ಲಿ ಶ್ರೀ ತಿಮ್ಮಪ್ಪ ನಾಯಕ್ ಸಿಪಿಐ ಕುಮಟಾ, ಹಾಗೂ ನವೀನ್ ನಾಯಕ್ ಪಿಎಸ್ಐ ಕುಮಟಾ ಅವರನ್ನು ಒಳಗೊಂಡ ತಂಡ ದಾಳಿ ಮಾಡಿ ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ರವಿ ಗುಡ್ಡಿ ಪಿಎಸ್ಐ, ಪದ್ಮಾ ದೇವಳಿ ಪಿಎಸ್ಐ, ಚಂದ್ರಮತಿ ಪಟಗಾರ ಪಿಎಸ್ಐ, ಸಿಬ್ಬಂದಿಗಳಾದ ಗಣೇಶ್ ನಾಯ್ಕ,ದಯಾನಂದ್ ನಾಯ್ಕ,ರಾಜು ನಾಯ್ಕ,ಆಸೀಫ್ ಆರ್ ಕೆ, ಗುರು ನಾಯಕ್, ಶಿವಾನಂದ ಜಾಡರ್, ಮಂಜುನಾಥ,ಪ್ರದೀಪ್ ನಾಯಕ್,ಧನಂಜಯ್ ಪಟಗಾರ,ಸಂಜೀವ ನಾಯ್ಕ್ ಭಾಗವಹಿಸಿದ್ದರು .
ವರದಿ :ಮಂಜುನಾಥ ಹರಿಜನ
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…