ಹುಬ್ಬಳ್ಳಿಯಲ್ಲಿ ಅನ್ನ ಭಾಗ್ಯ ಯೋಜನೆಗೆ ಕನ್ನ ಹಾಕುತ್ತಿರುವ ದಂಧೆ ಎಗ್ಗಿಲ್ಲದೇ ರಾಜಾರೋಷವಾಗಿ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಖಚಿತ ಮಾಹಿತಿ ಮೇರೆಗೆ ಪಡಿತರ ಅಕ್ಕಿಯ ಕಳ್ಳಸಾಗಣೆ ಮಾಡುತ್ತಿರುವ ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ಅಧಿಕಾರಿಗಳು ಅಕ್ಷರಶಃ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಇಸ್ಲಾಂಪುರ ಎಂಬುವಲ್ಲಿ ಬಡವರಿಗೆ ಉಚಿತವಾಗಿ ವಿತರಿಸಲು ಮೀಸಲಿಟ್ಟ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಖಲಂದರ್ ಅಲ್ಲಾಬಕ್ಷ ಅರಳಿಕಟ್ಟಿ ಎಂಬುವರನ್ನು ಪೊಲೀಸರು ನಿನ್ನೆ ತಡರಾತ್ರಿ ಬಂಧನ ಮಾಡಿದ್ದಾರೆ. ಆರೋಪಿಯ ವಿಚಾರಣೆ ವೇಳೆ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ದುಡ್ಡಿನ ವ್ಯಾಮೋಹದಿಂದ ಹೆಚ್ಚಿನ ಬೆಲೆಗೆ ಸದಾನಂದ ಕುರ್ಲಿ ಮತ್ತು ಸಚಿನ್ ಜರ್ತಾಕರ ಎಂಬ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದು ಬಯಲಾಗಿದೆ.
ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ಅಬ್ದುಲ್ ಮಜೀದ್ ಖತೀಬ್, ಸಹಾಯಕ ನಿರ್ದೇಶಕರಾದ ವಸುಂದರಾ ಹೆಗ್ಡೆ,ಹಾಗೂ ಸಿಸಿಬಿ ಸಿಬ್ಬಂದಿಯಾದ ವಿಎಸ್ಐಬಿಎನ್ ಲಂಗೋಟಿ, ಎಪ್ ಬಿ ಕುರಿ, ಎಸ್ಆರ್ ಇಚ್ಛಂಗಿ, ಹಾಗೂ ಕಸಬಾ ಪೊಲೀಸ ಠಾಣೆಯ ಎಎಸ್ಐ ಆದ ಪಿಎಂ ಗುಡ್ಡೇಕಾರ ಹಾಗೂ ಇನ್ನೂ ಅನೇಕ ಸಿಬ್ಬಂದಿಗಳು ಸಹ ಇದ್ದರು. ಸದ್ಯ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಮಾರು 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…