Crime

ಅನ್ನಭಾಗ್ಯಕ್ಕೆ ಕನ್ನ ಹಾಕುತ್ತಿರುವ ಖದೀಮರ ಬಂಧನ.

ಹುಬ್ಬಳ್ಳಿಯಲ್ಲಿ ಅನ್ನ ಭಾಗ್ಯ ಯೋಜನೆಗೆ ಕನ್ನ ಹಾಕುತ್ತಿರುವ ದಂಧೆ ಎಗ್ಗಿಲ್ಲದೇ ರಾಜಾರೋಷವಾಗಿ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಖಚಿತ ಮಾಹಿತಿ ಮೇರೆಗೆ ಪಡಿತರ ಅಕ್ಕಿಯ ಕಳ್ಳಸಾಗಣೆ ಮಾಡುತ್ತಿರುವ ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ಅಧಿಕಾರಿಗಳು ಅಕ್ಷರಶಃ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ಇಸ್ಲಾಂಪುರ ಎಂಬುವಲ್ಲಿ ಬಡವರಿಗೆ ಉಚಿತವಾಗಿ ವಿತರಿಸಲು ಮೀಸಲಿಟ್ಟ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಖಲಂದರ್ ಅಲ್ಲಾಬಕ್ಷ ಅರಳಿಕಟ್ಟಿ ಎಂಬುವರನ್ನು ಪೊಲೀಸರು ನಿನ್ನೆ ತಡರಾತ್ರಿ ಬಂಧನ ಮಾಡಿದ್ದಾರೆ. ಆರೋಪಿಯ ವಿಚಾರಣೆ ವೇಳೆ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ದುಡ್ಡಿನ ವ್ಯಾಮೋಹದಿಂದ ಹೆಚ್ಚಿನ ಬೆಲೆಗೆ ಸದಾನಂದ ಕುರ್ಲಿ ಮತ್ತು ಸಚಿನ್ ಜರ್ತಾಕರ ಎಂಬ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದು ಬಯಲಾಗಿದೆ.

ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ಅಬ್ದುಲ್ ಮಜೀದ್ ಖತೀಬ್, ಸಹಾಯಕ ನಿರ್ದೇಶಕರಾದ ವಸುಂದರಾ ಹೆಗ್ಡೆ,ಹಾಗೂ ಸಿಸಿಬಿ ಸಿಬ್ಬಂದಿಯಾದ ವಿಎಸ್ಐಬಿಎನ್ ಲಂಗೋಟಿ, ಎಪ್ ಬಿ ಕುರಿ, ಎಸ್ಆರ್ ಇಚ್ಛಂಗಿ, ಹಾಗೂ ಕಸಬಾ ಪೊಲೀಸ ಠಾಣೆಯ ಎಎಸ್ಐ ಆದ ಪಿಎಂ ಗುಡ್ಡೇಕಾರ ಹಾಗೂ ಇನ್ನೂ ಅನೇಕ ಸಿಬ್ಬಂದಿಗಳು ಸಹ ಇದ್ದರು. ಸದ್ಯ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಮಾರು 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago