Categories: CrimeLatest

ನಕಲಿ ಬಂಗಾರ ನೀಡಿ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದ ವ್ಯಕ್ತಿಗಳ ಬಂಧನ.

ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆ ಗಗನಕ್ಕೆ ಏರುತ್ತಿದ್ದು ಬಡವರು,ಮಧ್ಯಮ ವರ್ಗದವರು ಕೊಂಡುಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ಬಂಗಾರದ ಬೆಲೆ ಬಂದು ನಿಂತಿದೆ.ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಕಿಡಿಗೇಡಿಗಳು ನಕಲಿ ಬಂಗಾರ ನೀಡಿ ದುಡ್ಡು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ.ನಕಲಿ ಬಂಗಾರ ನೀಡಿ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ, ದಿನಾಂಕ 28-01-2026 ರಂದು ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಸನಕೆರೆ ಗ್ರಾಮದ ಎನ್ ಎಚ್ -50 ರ ರಸ್ತೆಯಲ್ಲಿ ಯಾರೋ ಇಬ್ಬರು ವ್ಯಕ್ತಿಗಳು ಸೇರಿಕೊಂಡು ತಮ್ಮ ಮನೆಯ ಪಾಯ ತೆಗೆಯುವ ಸಂದರ್ಭದಲ್ಲಿ ಸುಮಾರು ಒಂದು ಕೆಜಿ ಆಭರಣಗಳು ಸಿಕ್ಕಿದ್ದು, ಅವುಗಳನ್ನು ಮಾರುಕಟ್ಟೆಯ ಬೆಲೆಗಿಂತ ಕಡಿಮೆ ದರದಲ್ಲಿ ನಿಮಗೆ ನೀಡುತ್ತೇವೆ ಎಂದು ಹೇಳಿ ಕಂಟ್ರಾಕ್ಟರ್ ಕೆಲಸ ಮಾಡುವ ಜಿ ಕುಮಾರ್(49 ವರ್ಷ)ಎಂಬ ವ್ಯಕ್ತಿಯನ್ನು ಕ್ಯಾಸನಕೆರೆ ಗ್ರಾಮದ ಅರಣ್ಯ ಪ್ರದೇಶದ ಬಳಿ ಕರೆಯಿಸಿಕೊಂಡು ಅವರ ಬಳಿ ಇದ್ದ ಸುಮಾರು ಮೂವತ್ತು ಲಕ್ಷ ರೂಪಾಯಿಗಳನ್ನು ಕಿತ್ತುಕೊಂಡು ಹೋಗಿರುತ್ತಾರೆ.

ಹಣವನ್ನು ಕಳೆದುಕೊಂಡ ವ್ಯಕ್ತಿ ದಿನಾಂಕ 14-03-2026 ರಂದು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸುತ್ತಾರೆ.ಸದರಿ ಪ್ರಕರಣವನ್ನು ದಾಖಲಿಸಿದ ಹೊಸಹಳ್ಳಿ ಪೊಲೀಸ್ ಠಾಣೆಯವರು ಆರೋಪಿಗಳ ಪತ್ತೆಗಾಗಿ ಮಾನ್ಯ ಶ್ರೀ ಎಸ್ ಜಾಹ್ನವಿ ಐಪಿಎಸ್,ಪೊಲೀಸ್ ಅಧೀಕ್ಷಕರು ವಿಜಯನಗರ ಜಿಲ್ಲೆ, ಮತ್ತು ಮಾನ್ಯ ಶ್ರೀ ಮಂಜುನಾಥ್,ಹೆಚ್ಚುವರಿ ಪೊಲೀಸ್ ಅಧೀಕ್ಷಕರು,ವಿಜಯನಗರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಮಲ್ಲೇಶ್ ದೊಡ್ಡಮನಿ ಡಿವೈಎಸ್ಪಿ ಕೂಡ್ಲಿಗಿ ಉಪ ವಿಭಾಗ ಇವರ ನೇತೃತ್ವದಲ್ಲಿ ಶ್ರೀ ಡಿ ದುರುಗಪ್ಪ ಸಿಪಿಐ ಕೊಟ್ಟೂರು,ಶ್ರೀ ಸಿದ್ರಾಮ ಬಿದಾರಾಣಿ ಪಿಸ್ಐ ಹಾಗೂ ಸಿಬ್ಬಂದಿಗಳಾದ ಶ್ರೀ ಅಂಜನಮೂರ್ತಿ,ಎನ್.ಎಂ.ಸ್ವಾಮಿ,ಕೊಟ್ರೇಶ್, ವಿಜಯಕುಮಾರ್,ಮಂಜುನಾಥ್ ಬಿ.ಎಸ್,ಸುರೇಶ್ ಯು,ಕೊಟ್ರೇಶ್ ಅಂಗಡಿ,ಸಿದ್ದಲಿಂಗಪ್ಪ ಕೆ,ಸಂದೀಪ್ ಎಂ,ಬಿಳಿಚೋಡು ಮಾಲತೇಶ, ಕೃಷ್ಣಾನಾಯ್ಕ,ಗೌಡ್ರು ರವಿಚಂದ್ರ,ಕುಮಾರ್ ನಾಯ್ಕ ಇವರನ್ನು ಒಳಗೊಂಡಂತೆ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗಾಗಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದರು.ಈ ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ಪತ್ತೆ ಮಾಡಿ ಆರೋಪಿಗಳಿಂದ 29,50,000 ರೂ ಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ನೀಡಿರುತ್ತಾರೆ.ಸದರಿ ತಂಡದ ಕಾರ್ಯಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರು,ವಿಜಯನಗರ ಜಿಲ್ಲೆ ರವರು ಪ್ರಸಂಶಿರುತ್ತಾರೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago