Categories: CrimeLatest

ನಕಲಿ ಬಂಗಾರ ನೀಡಿ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದ ವ್ಯಕ್ತಿಗಳ ಬಂಧನ.

ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆ ಗಗನಕ್ಕೆ ಏರುತ್ತಿದ್ದು ಬಡವರು,ಮಧ್ಯಮ ವರ್ಗದವರು ಕೊಂಡುಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ಬಂಗಾರದ ಬೆಲೆ ಬಂದು ನಿಂತಿದೆ.ಇದನ್ನೇ ಬಂಡವಾಳ ಮಾಡಿಕೊಂಡ ಕೆಲವು ಕಿಡಿಗೇಡಿಗಳು ನಕಲಿ ಬಂಗಾರ ನೀಡಿ ದುಡ್ಡು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ.ನಕಲಿ ಬಂಗಾರ ನೀಡಿ ಲಕ್ಷಾಂತರ ರೂಪಾಯಿ ದೋಚಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ, ದಿನಾಂಕ 28-01-2026 ರಂದು ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಸನಕೆರೆ ಗ್ರಾಮದ ಎನ್ ಎಚ್ -50 ರ ರಸ್ತೆಯಲ್ಲಿ ಯಾರೋ ಇಬ್ಬರು ವ್ಯಕ್ತಿಗಳು ಸೇರಿಕೊಂಡು ತಮ್ಮ ಮನೆಯ ಪಾಯ ತೆಗೆಯುವ ಸಂದರ್ಭದಲ್ಲಿ ಸುಮಾರು ಒಂದು ಕೆಜಿ ಆಭರಣಗಳು ಸಿಕ್ಕಿದ್ದು, ಅವುಗಳನ್ನು ಮಾರುಕಟ್ಟೆಯ ಬೆಲೆಗಿಂತ ಕಡಿಮೆ ದರದಲ್ಲಿ ನಿಮಗೆ ನೀಡುತ್ತೇವೆ ಎಂದು ಹೇಳಿ ಕಂಟ್ರಾಕ್ಟರ್ ಕೆಲಸ ಮಾಡುವ ಜಿ ಕುಮಾರ್(49 ವರ್ಷ)ಎಂಬ ವ್ಯಕ್ತಿಯನ್ನು ಕ್ಯಾಸನಕೆರೆ ಗ್ರಾಮದ ಅರಣ್ಯ ಪ್ರದೇಶದ ಬಳಿ ಕರೆಯಿಸಿಕೊಂಡು ಅವರ ಬಳಿ ಇದ್ದ ಸುಮಾರು ಮೂವತ್ತು ಲಕ್ಷ ರೂಪಾಯಿಗಳನ್ನು ಕಿತ್ತುಕೊಂಡು ಹೋಗಿರುತ್ತಾರೆ.

ಹಣವನ್ನು ಕಳೆದುಕೊಂಡ ವ್ಯಕ್ತಿ ದಿನಾಂಕ 14-03-2026 ರಂದು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸುತ್ತಾರೆ.ಸದರಿ ಪ್ರಕರಣವನ್ನು ದಾಖಲಿಸಿದ ಹೊಸಹಳ್ಳಿ ಪೊಲೀಸ್ ಠಾಣೆಯವರು ಆರೋಪಿಗಳ ಪತ್ತೆಗಾಗಿ ಮಾನ್ಯ ಶ್ರೀ ಎಸ್ ಜಾಹ್ನವಿ ಐಪಿಎಸ್,ಪೊಲೀಸ್ ಅಧೀಕ್ಷಕರು ವಿಜಯನಗರ ಜಿಲ್ಲೆ, ಮತ್ತು ಮಾನ್ಯ ಶ್ರೀ ಮಂಜುನಾಥ್,ಹೆಚ್ಚುವರಿ ಪೊಲೀಸ್ ಅಧೀಕ್ಷಕರು,ವಿಜಯನಗರ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಮಲ್ಲೇಶ್ ದೊಡ್ಡಮನಿ ಡಿವೈಎಸ್ಪಿ ಕೂಡ್ಲಿಗಿ ಉಪ ವಿಭಾಗ ಇವರ ನೇತೃತ್ವದಲ್ಲಿ ಶ್ರೀ ಡಿ ದುರುಗಪ್ಪ ಸಿಪಿಐ ಕೊಟ್ಟೂರು,ಶ್ರೀ ಸಿದ್ರಾಮ ಬಿದಾರಾಣಿ ಪಿಸ್ಐ ಹಾಗೂ ಸಿಬ್ಬಂದಿಗಳಾದ ಶ್ರೀ ಅಂಜನಮೂರ್ತಿ,ಎನ್.ಎಂ.ಸ್ವಾಮಿ,ಕೊಟ್ರೇಶ್, ವಿಜಯಕುಮಾರ್,ಮಂಜುನಾಥ್ ಬಿ.ಎಸ್,ಸುರೇಶ್ ಯು,ಕೊಟ್ರೇಶ್ ಅಂಗಡಿ,ಸಿದ್ದಲಿಂಗಪ್ಪ ಕೆ,ಸಂದೀಪ್ ಎಂ,ಬಿಳಿಚೋಡು ಮಾಲತೇಶ, ಕೃಷ್ಣಾನಾಯ್ಕ,ಗೌಡ್ರು ರವಿಚಂದ್ರ,ಕುಮಾರ್ ನಾಯ್ಕ ಇವರನ್ನು ಒಳಗೊಂಡಂತೆ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗಾಗಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದರು.ಈ ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ಪತ್ತೆ ಮಾಡಿ ಆರೋಪಿಗಳಿಂದ 29,50,000 ರೂ ಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ನೀಡಿರುತ್ತಾರೆ.ಸದರಿ ತಂಡದ ಕಾರ್ಯಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರು,ವಿಜಯನಗರ ಜಿಲ್ಲೆ ರವರು ಪ್ರಸಂಶಿರುತ್ತಾರೆ.

ವರದಿ:- ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

9 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

9 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

9 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

9 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

9 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

9 hours ago