Latest

ದರೋಡೆಕೋರರ ಬಂಧನ

ಮುಂಡಗೋಡ:  ತಾಲೂಕಿನಲ್ಲಿ ಇತ್ತಿಚೆಗೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದ್ದು ಸಾರ್ವಜನಿಕರ, ಪ್ರಯಾಣಿಕರ ನಿದ್ದೆಗೆಡಿಸಿದೆ ಆದರೆ ಉತ್ತರ ಕನ್ನಡ ಜಿಲ್ಲೆಯ ಪೋಲಿಸ್ ಇಲಾಖೆಯ ಉತ್ತಮ ಕಾರ್ಯಾಚರಣೆಯಿಂದ ಹಲವಾರು ಅಕ್ರಮ ಚಟುವಟಿಕೆಗಳು ಹತೋಟಿಗೆ ಬರುತ್ತಿವೆ.
ದಿನಾಂಕ 07/02/2025 ರ ಶುಕ್ರವಾರ ಬೆಳಗಿನ ಜಾವ 6 ಗಂಟೆಯ ಸುಮಾರಿಗೆ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಗ್ರಾಮದ ಕ್ರಾಸ್‌ ಕ್ಕಿಂತ ಸುಮಾರು 01 ಕಿಮೀ ದೂರದಲ್ಲಿ ಡಾಂಬರ ರಸ್ತೆಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಕಾರು ನಿಲ್ಲಿಸಿಕೊಂಡು ನಿಂತಿದ್ದ ಮಲ್ಲಿಕಜಾನ್ ಶಬ್ಬರ ಶೇಖ್ ಸಾ//ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಇಬ್ರಾಹಿಂ ರಫಿಕ್ ಮಕ್ಬೂಲ್‌ಸಾಬ ಜಮಖಂಡಿ ಸ//ಚೌಡಳ್ಳಿ ಮುಂಡಗೋಡ, ಶಾಹಿಲ್ ಬಾಬಾಬುಡನ್ ನಂದಿಗಟ್ಟಿ ಸಾ//ಮಾರಿಕಾಂಬಾ ನಗರ ಮುಂಡಗೋಡ, ಹರುಣ ಹಮ್ಮಮ್ ಶೇಖ್ ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಯೂಸುಪ್ ರಿಯಾಜ್ ಅಹ್ಮದ್ ಗಡವಾಲೆ ಸಾ//ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಇಸ್ಮಾಯಿಲ್ ತಂದೆ ಸೈಸುದ್ದಿನ್ ಪಾನವಾಲೆ ಸಾ//ದೇಶಪಾಂಡೆನಗರ ಮುಂಡಗೋಡ, ತನ್ನೀರ ಅಬ್ದುಲ್ ಹಮೀದ್ ಅಕ್ಕಿಆಲೂರ ಸಾ//ಇಂದಿರಾನಗರ ಮುಂಡಗೋಡ, ದಾದಾಕಲಂದರ್ ಅಬ್ದುಲ್‌ಖಾದರ್ ಸಾ//ನೂರಾನಿಗಲ್ಲಿ ಮುಂಡಗೋಡ ಇವರನ್ನು ಮುಂಡಗೋಡ ಪೋಲಿಸರು ಬಂಧಿಸಿದ್ದಾರೆ.ಇವರು ದರೋಡೆಗೆ ಬಳಸಲು ತಂದಿದ್ದ ಕಾರು,ಎರಡು ಕಟ್ಟಿಗೆಯ ಬಡಿಗೆಗಳು, ಮೂರು ಕಬ್ಬಿಣದ ರಾಡಗಳು, ಚಾಕು, ಗಮ್ ಟೇಪ್ ಹಾಗೂ ಖಾರದ ಪುಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ .
ಈ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಮಾಡಲು ಎಮ್. ನಾರಾಯಣ ಐ.ಪಿ.ಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ, ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಗಣೇಶ ಕೆ.ಎಲ್ ಡಿ.ಎಸ್.ವಿ ಶಿರಸಿ ರವರ ಮಾರ್ಗದರ್ಶನದಲ್ಲಿ ಶ್ರೀ ರಂಗನಾಥ ನೀಲಮ್ಮನವರ ಪೊಲೀಸ್ ನಿರೀಕ್ಷಕರು ಮುಂಡಗೋಡ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ ಪಿ.ಎಸ್.ಐಗಳಾದ ಪರಸುರಾಮ ಮಿರ್ಜಗಿ, ಹನುಮಂತ ಕುಡಗುಂಟಿ ಹಾಗೂ ಸಿಬ್ಬಂದಿಯವರಾದ ಪಕೋಟೇಶ್ವರ ನಾಗರವಳ್ಳಿ ಅಣ್ಣಪ್ಪ ಬುಡಿಗೇರಿ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಇರುತ್ತದೆ. ಸದರಿ ಪ್ರಕರಣವನ್ನು ಪತ್ತೆ ಮಾಡಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾನ್ಯ ಪೋಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ಶ್ಲಾಘಿಸಿದ್ದು ಪ್ರಶಂಸೆ ವ್ಯಕ್ತ ಪಡಿಸಿರುತ್ತಾರೆ. ವರದಿ: ಮಂಜುನಾಥ್ ಎಫ್ ಹೆಚ್

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

22 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

22 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

23 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago