Latest

ದರೋಡೆಕೋರರ ಬಂಧನ

ಮುಂಡಗೋಡ:  ತಾಲೂಕಿನಲ್ಲಿ ಇತ್ತಿಚೆಗೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದ್ದು ಸಾರ್ವಜನಿಕರ, ಪ್ರಯಾಣಿಕರ ನಿದ್ದೆಗೆಡಿಸಿದೆ ಆದರೆ ಉತ್ತರ ಕನ್ನಡ ಜಿಲ್ಲೆಯ ಪೋಲಿಸ್ ಇಲಾಖೆಯ ಉತ್ತಮ ಕಾರ್ಯಾಚರಣೆಯಿಂದ ಹಲವಾರು ಅಕ್ರಮ ಚಟುವಟಿಕೆಗಳು ಹತೋಟಿಗೆ ಬರುತ್ತಿವೆ.
ದಿನಾಂಕ 07/02/2025 ರ ಶುಕ್ರವಾರ ಬೆಳಗಿನ ಜಾವ 6 ಗಂಟೆಯ ಸುಮಾರಿಗೆ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಗ್ರಾಮದ ಕ್ರಾಸ್‌ ಕ್ಕಿಂತ ಸುಮಾರು 01 ಕಿಮೀ ದೂರದಲ್ಲಿ ಡಾಂಬರ ರಸ್ತೆಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಕಾರು ನಿಲ್ಲಿಸಿಕೊಂಡು ನಿಂತಿದ್ದ ಮಲ್ಲಿಕಜಾನ್ ಶಬ್ಬರ ಶೇಖ್ ಸಾ//ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಇಬ್ರಾಹಿಂ ರಫಿಕ್ ಮಕ್ಬೂಲ್‌ಸಾಬ ಜಮಖಂಡಿ ಸ//ಚೌಡಳ್ಳಿ ಮುಂಡಗೋಡ, ಶಾಹಿಲ್ ಬಾಬಾಬುಡನ್ ನಂದಿಗಟ್ಟಿ ಸಾ//ಮಾರಿಕಾಂಬಾ ನಗರ ಮುಂಡಗೋಡ, ಹರುಣ ಹಮ್ಮಮ್ ಶೇಖ್ ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಯೂಸುಪ್ ರಿಯಾಜ್ ಅಹ್ಮದ್ ಗಡವಾಲೆ ಸಾ//ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಇಸ್ಮಾಯಿಲ್ ತಂದೆ ಸೈಸುದ್ದಿನ್ ಪಾನವಾಲೆ ಸಾ//ದೇಶಪಾಂಡೆನಗರ ಮುಂಡಗೋಡ, ತನ್ನೀರ ಅಬ್ದುಲ್ ಹಮೀದ್ ಅಕ್ಕಿಆಲೂರ ಸಾ//ಇಂದಿರಾನಗರ ಮುಂಡಗೋಡ, ದಾದಾಕಲಂದರ್ ಅಬ್ದುಲ್‌ಖಾದರ್ ಸಾ//ನೂರಾನಿಗಲ್ಲಿ ಮುಂಡಗೋಡ ಇವರನ್ನು ಮುಂಡಗೋಡ ಪೋಲಿಸರು ಬಂಧಿಸಿದ್ದಾರೆ.ಇವರು ದರೋಡೆಗೆ ಬಳಸಲು ತಂದಿದ್ದ ಕಾರು,ಎರಡು ಕಟ್ಟಿಗೆಯ ಬಡಿಗೆಗಳು, ಮೂರು ಕಬ್ಬಿಣದ ರಾಡಗಳು, ಚಾಕು, ಗಮ್ ಟೇಪ್ ಹಾಗೂ ಖಾರದ ಪುಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ .
ಈ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಮಾಡಲು ಎಮ್. ನಾರಾಯಣ ಐ.ಪಿ.ಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ, ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಗಣೇಶ ಕೆ.ಎಲ್ ಡಿ.ಎಸ್.ವಿ ಶಿರಸಿ ರವರ ಮಾರ್ಗದರ್ಶನದಲ್ಲಿ ಶ್ರೀ ರಂಗನಾಥ ನೀಲಮ್ಮನವರ ಪೊಲೀಸ್ ನಿರೀಕ್ಷಕರು ಮುಂಡಗೋಡ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ ಪಿ.ಎಸ್.ಐಗಳಾದ ಪರಸುರಾಮ ಮಿರ್ಜಗಿ, ಹನುಮಂತ ಕುಡಗುಂಟಿ ಹಾಗೂ ಸಿಬ್ಬಂದಿಯವರಾದ ಪಕೋಟೇಶ್ವರ ನಾಗರವಳ್ಳಿ ಅಣ್ಣಪ್ಪ ಬುಡಿಗೇರಿ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಇರುತ್ತದೆ. ಸದರಿ ಪ್ರಕರಣವನ್ನು ಪತ್ತೆ ಮಾಡಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾನ್ಯ ಪೋಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ಶ್ಲಾಘಿಸಿದ್ದು ಪ್ರಶಂಸೆ ವ್ಯಕ್ತ ಪಡಿಸಿರುತ್ತಾರೆ. ವರದಿ: ಮಂಜುನಾಥ್ ಎಫ್ ಹೆಚ್

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago