Latest

ದರೋಡೆಕೋರರ ಬಂಧನ

ಮುಂಡಗೋಡ:  ತಾಲೂಕಿನಲ್ಲಿ ಇತ್ತಿಚೆಗೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದ್ದು ಸಾರ್ವಜನಿಕರ, ಪ್ರಯಾಣಿಕರ ನಿದ್ದೆಗೆಡಿಸಿದೆ ಆದರೆ ಉತ್ತರ ಕನ್ನಡ ಜಿಲ್ಲೆಯ ಪೋಲಿಸ್ ಇಲಾಖೆಯ ಉತ್ತಮ ಕಾರ್ಯಾಚರಣೆಯಿಂದ ಹಲವಾರು ಅಕ್ರಮ ಚಟುವಟಿಕೆಗಳು ಹತೋಟಿಗೆ ಬರುತ್ತಿವೆ.
ದಿನಾಂಕ 07/02/2025 ರ ಶುಕ್ರವಾರ ಬೆಳಗಿನ ಜಾವ 6 ಗಂಟೆಯ ಸುಮಾರಿಗೆ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಗ್ರಾಮದ ಕ್ರಾಸ್‌ ಕ್ಕಿಂತ ಸುಮಾರು 01 ಕಿಮೀ ದೂರದಲ್ಲಿ ಡಾಂಬರ ರಸ್ತೆಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಕಾರು ನಿಲ್ಲಿಸಿಕೊಂಡು ನಿಂತಿದ್ದ ಮಲ್ಲಿಕಜಾನ್ ಶಬ್ಬರ ಶೇಖ್ ಸಾ//ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಇಬ್ರಾಹಿಂ ರಫಿಕ್ ಮಕ್ಬೂಲ್‌ಸಾಬ ಜಮಖಂಡಿ ಸ//ಚೌಡಳ್ಳಿ ಮುಂಡಗೋಡ, ಶಾಹಿಲ್ ಬಾಬಾಬುಡನ್ ನಂದಿಗಟ್ಟಿ ಸಾ//ಮಾರಿಕಾಂಬಾ ನಗರ ಮುಂಡಗೋಡ, ಹರುಣ ಹಮ್ಮಮ್ ಶೇಖ್ ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಯೂಸುಪ್ ರಿಯಾಜ್ ಅಹ್ಮದ್ ಗಡವಾಲೆ ಸಾ//ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಇಸ್ಮಾಯಿಲ್ ತಂದೆ ಸೈಸುದ್ದಿನ್ ಪಾನವಾಲೆ ಸಾ//ದೇಶಪಾಂಡೆನಗರ ಮುಂಡಗೋಡ, ತನ್ನೀರ ಅಬ್ದುಲ್ ಹಮೀದ್ ಅಕ್ಕಿಆಲೂರ ಸಾ//ಇಂದಿರಾನಗರ ಮುಂಡಗೋಡ, ದಾದಾಕಲಂದರ್ ಅಬ್ದುಲ್‌ಖಾದರ್ ಸಾ//ನೂರಾನಿಗಲ್ಲಿ ಮುಂಡಗೋಡ ಇವರನ್ನು ಮುಂಡಗೋಡ ಪೋಲಿಸರು ಬಂಧಿಸಿದ್ದಾರೆ.ಇವರು ದರೋಡೆಗೆ ಬಳಸಲು ತಂದಿದ್ದ ಕಾರು,ಎರಡು ಕಟ್ಟಿಗೆಯ ಬಡಿಗೆಗಳು, ಮೂರು ಕಬ್ಬಿಣದ ರಾಡಗಳು, ಚಾಕು, ಗಮ್ ಟೇಪ್ ಹಾಗೂ ಖಾರದ ಪುಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ .
ಈ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಮಾಡಲು ಎಮ್. ನಾರಾಯಣ ಐ.ಪಿ.ಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ, ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಗಣೇಶ ಕೆ.ಎಲ್ ಡಿ.ಎಸ್.ವಿ ಶಿರಸಿ ರವರ ಮಾರ್ಗದರ್ಶನದಲ್ಲಿ ಶ್ರೀ ರಂಗನಾಥ ನೀಲಮ್ಮನವರ ಪೊಲೀಸ್ ನಿರೀಕ್ಷಕರು ಮುಂಡಗೋಡ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ ಪಿ.ಎಸ್.ಐಗಳಾದ ಪರಸುರಾಮ ಮಿರ್ಜಗಿ, ಹನುಮಂತ ಕುಡಗುಂಟಿ ಹಾಗೂ ಸಿಬ್ಬಂದಿಯವರಾದ ಪಕೋಟೇಶ್ವರ ನಾಗರವಳ್ಳಿ ಅಣ್ಣಪ್ಪ ಬುಡಿಗೇರಿ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಇರುತ್ತದೆ. ಸದರಿ ಪ್ರಕರಣವನ್ನು ಪತ್ತೆ ಮಾಡಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾನ್ಯ ಪೋಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ಶ್ಲಾಘಿಸಿದ್ದು ಪ್ರಶಂಸೆ ವ್ಯಕ್ತ ಪಡಿಸಿರುತ್ತಾರೆ. ವರದಿ: ಮಂಜುನಾಥ್ ಎಫ್ ಹೆಚ್

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago