Latest

ದರೋಡೆಕೋರರ ಬಂಧನ

ಮುಂಡಗೋಡ:  ತಾಲೂಕಿನಲ್ಲಿ ಇತ್ತಿಚೆಗೆ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದ್ದು ಸಾರ್ವಜನಿಕರ, ಪ್ರಯಾಣಿಕರ ನಿದ್ದೆಗೆಡಿಸಿದೆ ಆದರೆ ಉತ್ತರ ಕನ್ನಡ ಜಿಲ್ಲೆಯ ಪೋಲಿಸ್ ಇಲಾಖೆಯ ಉತ್ತಮ ಕಾರ್ಯಾಚರಣೆಯಿಂದ ಹಲವಾರು ಅಕ್ರಮ ಚಟುವಟಿಕೆಗಳು ಹತೋಟಿಗೆ ಬರುತ್ತಿವೆ.
ದಿನಾಂಕ 07/02/2025 ರ ಶುಕ್ರವಾರ ಬೆಳಗಿನ ಜಾವ 6 ಗಂಟೆಯ ಸುಮಾರಿಗೆ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಗ್ರಾಮದ ಕ್ರಾಸ್‌ ಕ್ಕಿಂತ ಸುಮಾರು 01 ಕಿಮೀ ದೂರದಲ್ಲಿ ಡಾಂಬರ ರಸ್ತೆಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಕಾರು ನಿಲ್ಲಿಸಿಕೊಂಡು ನಿಂತಿದ್ದ ಮಲ್ಲಿಕಜಾನ್ ಶಬ್ಬರ ಶೇಖ್ ಸಾ//ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಇಬ್ರಾಹಿಂ ರಫಿಕ್ ಮಕ್ಬೂಲ್‌ಸಾಬ ಜಮಖಂಡಿ ಸ//ಚೌಡಳ್ಳಿ ಮುಂಡಗೋಡ, ಶಾಹಿಲ್ ಬಾಬಾಬುಡನ್ ನಂದಿಗಟ್ಟಿ ಸಾ//ಮಾರಿಕಾಂಬಾ ನಗರ ಮುಂಡಗೋಡ, ಹರುಣ ಹಮ್ಮಮ್ ಶೇಖ್ ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಯೂಸುಪ್ ರಿಯಾಜ್ ಅಹ್ಮದ್ ಗಡವಾಲೆ ಸಾ//ಕಿಲ್ಲೆ ಓಣಿ ಮುಂಡಗೋಡ, ಮಹಮ್ಮದ ಇಸ್ಮಾಯಿಲ್ ತಂದೆ ಸೈಸುದ್ದಿನ್ ಪಾನವಾಲೆ ಸಾ//ದೇಶಪಾಂಡೆನಗರ ಮುಂಡಗೋಡ, ತನ್ನೀರ ಅಬ್ದುಲ್ ಹಮೀದ್ ಅಕ್ಕಿಆಲೂರ ಸಾ//ಇಂದಿರಾನಗರ ಮುಂಡಗೋಡ, ದಾದಾಕಲಂದರ್ ಅಬ್ದುಲ್‌ಖಾದರ್ ಸಾ//ನೂರಾನಿಗಲ್ಲಿ ಮುಂಡಗೋಡ ಇವರನ್ನು ಮುಂಡಗೋಡ ಪೋಲಿಸರು ಬಂಧಿಸಿದ್ದಾರೆ.ಇವರು ದರೋಡೆಗೆ ಬಳಸಲು ತಂದಿದ್ದ ಕಾರು,ಎರಡು ಕಟ್ಟಿಗೆಯ ಬಡಿಗೆಗಳು, ಮೂರು ಕಬ್ಬಿಣದ ರಾಡಗಳು, ಚಾಕು, ಗಮ್ ಟೇಪ್ ಹಾಗೂ ಖಾರದ ಪುಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ .
ಈ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಮಾಡಲು ಎಮ್. ನಾರಾಯಣ ಐ.ಪಿ.ಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ, ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಗಣೇಶ ಕೆ.ಎಲ್ ಡಿ.ಎಸ್.ವಿ ಶಿರಸಿ ರವರ ಮಾರ್ಗದರ್ಶನದಲ್ಲಿ ಶ್ರೀ ರಂಗನಾಥ ನೀಲಮ್ಮನವರ ಪೊಲೀಸ್ ನಿರೀಕ್ಷಕರು ಮುಂಡಗೋಡ ಪೊಲೀಸ್ ಠಾಣೆ ಇವರ ನೇತೃತ್ವದಲ್ಲಿ ಪಿ.ಎಸ್.ಐಗಳಾದ ಪರಸುರಾಮ ಮಿರ್ಜಗಿ, ಹನುಮಂತ ಕುಡಗುಂಟಿ ಹಾಗೂ ಸಿಬ್ಬಂದಿಯವರಾದ ಪಕೋಟೇಶ್ವರ ನಾಗರವಳ್ಳಿ ಅಣ್ಣಪ್ಪ ಬುಡಿಗೇರಿ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಇರುತ್ತದೆ. ಸದರಿ ಪ್ರಕರಣವನ್ನು ಪತ್ತೆ ಮಾಡಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾನ್ಯ ಪೋಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರು ಶ್ಲಾಘಿಸಿದ್ದು ಪ್ರಶಂಸೆ ವ್ಯಕ್ತ ಪಡಿಸಿರುತ್ತಾರೆ. ವರದಿ: ಮಂಜುನಾಥ್ ಎಫ್ ಹೆಚ್

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago