Latest

ಶ್ರೀಗಂಧ ಮರಗಳ್ಳನ ಬಂಧನ; ಮರದ ತುಂಡುಗಳು ವಶಕ್ಕೆ ಪಡೆದ ಕೋಲಾರ ಪೊಲೀಸರು.

ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಂದ ಗುಪ್ತ ಮಾಹಿತಿಯೊಂದಿಗೆ ಮಿಂಚಿನ ಕಾರ್ಯಚರಣೆ ನಡೆಸಿ, ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಆರೋಪಿ ಬಂಧಿಸಿ ಅವನಿಂದ 15 ಕೆ.ಜಿ ತೂಕದ ಶ್ರೀಗಂಧ ಮರದ ತುಂಡುಗಳು ವಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸಾದ್.ವಿ ಸುಗಟೂರು ಹೋಬಳಿಯ ತಮ್ಮ ತೋಟದ ಸುತ್ತಲೂ ಸುಮಾರು 200 ಶ್ರೀಗಂಧದ ಮರಗಳನ್ನು ಬೆಳೆಸಿದ್ದರು, ಮರಗಳು ಸುಮಾರು 26 ಅಡಿಗಳ ಉದ್ದ, ದಪ್ಪ 1.4 ಅಡಿಗಳಿದ್ದು ದಿನಾಂಕ 23-07-2024 ರಂದು ಮಧ್ಯರಾತ್ರಿಯ ಸಮಯದಲ್ಲಿ ನಾಯಿಗಳು ಸದ್ದು ಮಾಡುತ್ತಿದ್ದನ್ನು ಕಂಡು, ಮನೆಯಿಂದ ಹೊರಗಡೆ ಬಂದು ನೋಡಿದಾಗ ಮನೆಯ ಪಕ್ಕದಲ್ಲಿ ತಮ್ಮ ತೋಟದಲ್ಲಿರುವಂತಹ ಶ್ರೀಗಂಧದ ಮರಗಳ ಪೈಕಿ 5 ಮರಗಳು ಕಡಿದು ಕಳ್ಳರು ಕಳವು ಮಾಡಿದ್ದು, ಉಳಿದ ಸುಮಾರು 6 ಮರಗಳಿಗೆ ರಂಪದಲ್ಲಿ ಸ್ವಲ್ಪಮಟ್ಟಿಗೆ ಕೊಯ್ದು ಪರಾರಿಯಾಗಿದ್ದಾರೆ. ಕೊಡಲೇ ಶ್ರೀಗಂಧ ಮರಗಳ ಕಳ್ಳತನದ ದೂರನ್ನು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ .ಬಿ ಐ.ಪಿ.ಎಸ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರವಿಶಂಕರ್ ಮತ್ತು ಜಗದೀಶ್ ರವರ ಮಾರ್ಗದರ್ಶನದಲ್ಲಿ ಕೋಲಾರ ಉಪವಿಭಾಗದ ಪೋಲಿಸ್ ಉಪಾಧೀಕ್ಷಕರಾದ ಎಂ.ಹೆಚ್.ನಾಗ್ಲೆ ರವರ
ಮುಂದಾಳತ್ವದಲ್ಲಿ ಕಾಂತರಾಜ.ಕೆ ಪೊಲೀಸ್ ಇನ್ಸಪೆಕ್ಟ‌ರ್ ಮತ್ತು ಅವರ ತಂಡದ ಸಾಧಿಕ್ ಪಾಷ, ರಾಜೇಶ್, ಹಾಗೂ ಜಿಲ್ಲಾ ಅಪರಾಧ ಪತ್ತೆದಳ ಸಿಬ್ಬಂದಿಯಾದ ರಾಘವೇಂದ್ರ, ಆಂಜಿನಪ್ಪ, ನವೀನ್, ಸತೀಶ್ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಮುರಳಿ ರವರು ಹಲವಾರು ಗುಪ್ತ ಮಾಹಿತಿಯೊಂದಿಗೆ ಮಾಹಿತಿ ಕಲೆಹಾಕಿ ಆರೋಪಿಯಾದ ವೆಂಕಟರಮಣಪ್ಪ 50 ವರ್ಷ, ಉಪ್ಪಾರಪಲ್ಲಿ ಗ್ರಾಮ, ಲಕ್ಷ್ಮೀಪುರ ಪಂಚಾಯ್ತಿ, ಶ್ರೀನಿವಾಸಪುರ ತಾಲ್ಲೂಕು, ಎಂಬ ಆರೋಪಿಯಿಂದ ಮಾಲು ಸಮೇತ ಕೋಲಾರ-ಶ್ರೀನಿವಾಸಪುರ ರಸ್ತೆಯ ಮೂರಾಂಡಹಳ್ಳಿ ಕ್ರಾಸ್ ಬಳಿ ಬಂಧಿಸಿ ಇತನಿಂದ ಸುಮಾರು 50,000 ರೂ. ಬೆಲೆ ಬಾಳುವ 15 ಕೆ.ಜಿ ತೂಕದ ಶ್ರೀಗಂಧ ಮರದ ತುಂಡುಗಳನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಕಾರ್ಯಚರಣೆಯಲ್ಲಿ ಪಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

18 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

23 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

23 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

23 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

23 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago