Latest

ಬೈಕ್‌ನಲ್ಲಿ ಬಂದು, ಲಾಂಗ್, ಮಚ್ಚು, ಡ್ರಾಗನ್, ರಾಡುಗಳನ್ನು ತೋರಿಸಿ ದರೋಡೆ ಮಾಡಿದ್ದ ಆರೋಪಿಗಳ ಬಂಧನ

ಮೈಸೂರು ನಗರ, ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಂಭೀರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೈಸೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ದರೋಡೆಕೋರರನ್ನು ಬಂಧಿಸಲು ಪೊಲೀಸರಿಗೆ ಯಶಸ್ಸು ಲಭಿಸಿದೆ.

ಪ್ರಕರಣದ ಸಂಕ್ಷಿಪ್ತ ವಿವರ:
ಪಿರ್ಯಾದಿದಾರರಾದ ಎಂ.ಎನ್. ಗಿರೀಶ್ ಬಿನ್ ನಾಗಶೆಟ್ಟಿ (44 ವರ್ಷ), ಎಲೆಕ್ಟ್ರಿಕಲ್ ಕೆಲಸಗಾರರು, ಎಸ್.ವಿ.ಪಿ. ನಗರ, ಮೈಸೂರು, ದಿನಾಂಕ: 13/03/2025 ರಂದು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, “ರಾತ್ರಿ ಸುಮಾರು 9-00 ಗಂಟೆಗೆ ನಾಲ್ಕು ಮಂದಿ ದರೋಡೆಕೋರರು, ಎರಡು ಬೈಕ್‌ಗಳಲ್ಲಿ ಬಂದು, ಲಾಂಗ್, ಮಚ್ಚು, ಡ್ರಾಗನ್, ರಾಡುಗಳನ್ನು ತೋರಿಸಿ, ನನ್ನ ಹೆಂಡತಿ ಮತ್ತು ಮಕ್ಕಳಿಗೆ ಬೆದರಿಕೆ ಮಾಡಿ, ಮಚ್ಚುಗಳಿಂದ ಗಾಯಗೊಳಿಸಿ, ನನ್ನ 23 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ. ಈ ದೂರಿನ ಮೇಲೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊ.ನಂ: 23/2025, ಕಲಂ: 309(6), 329(4), 310(2) ಬಿ.ಎನ್.ಎಸ್ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಯಿತು.

ಪೊಲೀಸರಿಂದ ಕೈಗೊಳ್ಳಲಾದ ಕಾರ್ಯಾಚರಣೆ:
ಮಾನ್ಯ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಐ.ಪಿ.ಎಸ್. ರವರ ನಿರ್ದೇಶನದಲ್ಲಿ, ಉಪ ಪೊಲೀಸ್ ಆಯುಕ್ತರು (ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗ) ಶ್ರೀಮತಿ ಜಾಹ್ನವಿ.ಎಸ್., ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ದೇವರಾಜ ವಿಭಾಗದ ಎ.ಸಿ.ಪಿ. ಶ್ರೀ ರಾಜೇಂದ್ರ ನೇತೃತ್ವದಲ್ಲಿ, ಆಲನಹಳ್ಳಿ ಠಾಣೆಯ ಪಿ.ಐ. ಶ್ರೀಮತಿ ಸ್ವರ್ಣ.ಜಿ.ಎಸ್., ಎಸ್.ಐ. ಗಂಗಾಧರ್ ಹಾಗೂ ಸಿಬ್ಬಂದಿಗಳಾದ ಚೇತನ, ಕಿರಣ್ ರಾಥೋಡ್, ಲಿಂಗರಾಜಪ್ಪ, ಮಂಜುನಾಥ್ ಗದಗೈಗೋಳ, ಮಲ್ಲಿಕಾರ್ಜುನ, ಸಂತೋಷ್ ಕುಮಾರ್, ಶಾಜಿಯಾ ಬಾನು, ಅಭಿಷೇಕ್ ಮತ್ತು ಆಟೋಮಿಷನ್ ಸೆಂಟರ್‌ನ ಎಸ್.ಐ. ಚಂದ್ರಶೇಖರ್ ರಾವ್, ಸಿಬ್ಬಂದಿಗಳಾದ ಪ್ರದೀಪ್, ಶಿವಕುಮಾರ್ ಹಾಗೂ ಸಿ.ಡಿ.ಆರ್ ವಿಭಾಗದ ಕುಮಾರ್ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಬಂಧಿತ ಆರೋಪಿಗಳು:

1. ಯೋಗಾನಂದ @ ಯೋಗ @ ಆನಂದ @ ದಡಿಯಾ @ ಉಪೇಂದ್ರ ಬಿನ್ ಕೃಷ್ಣಗೌಡ (34 ವರ್ಷ), ಆಟೋ ಚಾಲಕ, ಮಾರಸಿಂಗನಹಳ್ಳಿ, ಮದ್ದೂರು, ಮಂಡ್ಯ ಜಿಲ್ಲೆ.

2. ಅಭಿಷೇಕ್ @ ಬ್ಯಾಡ್ರಾಯನಪುರ ಅಭಿ, ಆಟೋ ಚಾಲಕ, ಬ್ಯಾಟರಾಯನಪುರ, ಮೈಸೂರು ರಸ್ತೆ, ಬೆಂಗಳೂರು.

3. ಮನು ಕುಮಾರ್ ಬಿನ್ ವೀರಯ್ಯ (27 ವರ್ಷ), ಬಿತ್ತರಿ ನೀರಿನ ಕ್ಯಾನ್ ಡಿಲಿವರಿ ಕೆಲಸ, ಕಣ್ಣೂರು, ಕೊಳ್ಳೆಗಾಲ ತಾಲ್ಲೂಕು, ಚಾಮರಾಜನಗರ.

4. ಆಕಾಶ್ ಬಿನ್ ನಾಗರಾಜು (26 ವರ್ಷ), ಟ್ಯಾಟೂ ಕಲಾವಿದ, ಕಣ್ಣೂರು, ಕೊಳ್ಳೆಗಾಲ, ಚಾಮರಾಜನಗರ.

5. ವೆಂಕಟೇಶ್.ಎಸ್ @ ಗಜ ಬಿನ್ ಶಿವಣ್ಣ (26 ವರ್ಷ), ಕಾರು ಚಾಲಕ, ಗುಂಡಶೆಟ್ಟಿಹಳ್ಳಿ, ಚನ್ನರಾಯಪಟ್ಟಣ, ಹಾಸನ.

ವಶಪಡಿಸಿದ ಮಾಲುಗಳು:

23 ಗ್ರಾಂ ತೂಕದ ಚಿನ್ನದ ಸರ

2 ಮಚ್ಚುಗಳು

2 ಡ್ರಾಗನ್‌ಗಳು

2 ರಾಡುಗಳು

ಮಾಸ್ಕ್, ಕೈಕವಚಗಳು, ಹೆಲ್ಮೆಟ್‌ಗಳು

ಬಜಾಜ್ ಪಲ್ಸರ್ 125 ಮತ್ತು ಬಜಾಜ್ ಪಲ್ಸರ್ 150 ಬೈಕ್‌ಗಳು
ಒಟ್ಟು ಮೌಲ್ಯ: ₹4,00,000

ಆರೋಪಿಗಳು ಬಳಸಿದ ವಾಹನಗಳ ವಿವರ:
ಈ ದರೋಡೆಕೋರರು ಬಳಸಿದ ಬೈಕ್‌ಗಳು ಮೈಸೂರಿನ ಘಟನೆಗೆ ಮೊದಲೇ ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೋಷಿತ ಪ್ರಕರಣಗಳಾಗಿ ದಾಖಲಾಗಿವೆ:

1. ಗಿರಿನಗರ ಪೊಲೀಸ್ ಠಾಣೆ FIR ಸಂಖ್ಯೆ: 23/2025, ಕಲಂ 303(2) ಬಿ.ಎನ್.ಎಸ್.

2. ಗಿರಿನಗರ ಪೊಲೀಸ್ ಠಾಣೆ FIR ಸಂಖ್ಯೆ: 57/2025, ಕಲಂ 303(2) ಬಿ.ಎನ್.ಎಸ್.

 
ಆಲನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಶ್ರಮದ ಫಲವಾಗಿ ಪ್ರಕರಣ ಬೆರಿಸಿದ್ದು. ಮಾನ್ಯ ಪೊಲೀಸ್ ಆಯುಕ್ತರು ಈ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ವರದಿ: ಬಸವಣ್ಣ

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

56 minutes ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

58 minutes ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

60 minutes ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

1 hour ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

1 hour ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

1 hour ago