Latest

ಮಾದಕ ವಸ್ತು ಮತ್ತು ಚರಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರ ಬಂಧನ..!

ಉತ್ತರ ಕನ್ನಡ:  ಜಿಲ್ಲೆಯ ಭಟ್ಕಳ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಂ ಬೀಚ್ ರಸ್ತೆಯಲ್ಲಿ ಪ್ರವಾಸಿಗರಿಗೆ ಮಾದಕ ವಸ್ತು ಹಾಗೂ ಚರಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಬಂಧಿತರಿಂದ 10 ಲಕ್ಷ ರೂಪಾಯಿ ಮೌಲ್ಯದ ಒಂದೂವರೆ ಕೆಜಿಗೂ ಅಧಿಕ ಮೌಲ್ಯದ ಚರಸ್ ಅನ್ನು ಹಾಗೂ ಒಂದು ದ್ವಿಚಕ್ರ ವಾಹನ ಮತ್ತು 2 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗೋಕರ್ಣದ ಬೇಲಿ ಹಿತ್ತಲು ನಿವಾಸಿ ತುಳಸು ಹಮ್ಮು ಗೌಡ, ಮೂಲೆಕೇರಿ ನಿವಾಸಿ ಶ್ರೀಧರ್ ಗೌಡ ಹಾಗೂ ಕೂಡ್ಲ ನಿವಾಸಿ ಸಂತ ಬಹದ್ದೂರ್ ತಮಂಗ್ ಅವರೇ ಬಂಧಿತ ಆರೋಪಿಗಳಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ ಟಿ ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಭಟ್ಕಳ ಡಿವೈಎಸ್ಪಿ ಶ್ರೀಕಾಂತ್, ಗೋಕರ್ಣ ನಿರೀಕ್ಷಕ ಮಂಜುನಾಥ ಎಮ್, ಉಪನಿರೀಕ್ಷಕ ಹರೀಶ್ ಹೆಚ್‌ ವಿ, ಪಿಎಸ್ಐ ಸಕ್ತಿವೇಲು, ಎಎಸ್ಐ ಅರವಿಂದ ಶೇಟ್ ಹಾಗೂ ಸಿಬ್ಬಂದಿಗಳಾದ ವಸಂತ ನಾಯ್ಕ, ರಾಜೇಶ್ ನಾಯ್ಕ, ಸಚಿನ್ ನಾಯ್ಕ್, ನಾಗರಾಜ ನಾಯ್ಕ, ಜಿ ಬಿ ರಾಣೆ, ಕಿರಣ್ ಕುಮಾರ್, ಗಣೇಶ್ ದಾಸರ್ ಅವರು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ :ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

54 minutes ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

1 hour ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

1 hour ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

7 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

7 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

7 hours ago