ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಂ ಬೀಚ್ ರಸ್ತೆಯಲ್ಲಿ ಪ್ರವಾಸಿಗರಿಗೆ ಮಾದಕ ವಸ್ತು ಹಾಗೂ ಚರಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದವರನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಬಂಧಿತರಿಂದ 10 ಲಕ್ಷ ರೂಪಾಯಿ ಮೌಲ್ಯದ ಒಂದೂವರೆ ಕೆಜಿಗೂ ಅಧಿಕ ಮೌಲ್ಯದ ಚರಸ್ ಅನ್ನು ಹಾಗೂ ಒಂದು ದ್ವಿಚಕ್ರ ವಾಹನ ಮತ್ತು 2 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗೋಕರ್ಣದ ಬೇಲಿ ಹಿತ್ತಲು ನಿವಾಸಿ ತುಳಸು ಹಮ್ಮು ಗೌಡ, ಮೂಲೆಕೇರಿ ನಿವಾಸಿ ಶ್ರೀಧರ್ ಗೌಡ ಹಾಗೂ ಕೂಡ್ಲ ನಿವಾಸಿ ಸಂತ ಬಹದ್ದೂರ್ ತಮಂಗ್ ಅವರೇ ಬಂಧಿತ ಆರೋಪಿಗಳಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ ಟಿ ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಭಟ್ಕಳ ಡಿವೈಎಸ್ಪಿ ಶ್ರೀಕಾಂತ್, ಗೋಕರ್ಣ ನಿರೀಕ್ಷಕ ಮಂಜುನಾಥ ಎಮ್, ಉಪನಿರೀಕ್ಷಕ ಹರೀಶ್ ಹೆಚ್ ವಿ, ಪಿಎಸ್ಐ ಸಕ್ತಿವೇಲು, ಎಎಸ್ಐ ಅರವಿಂದ ಶೇಟ್ ಹಾಗೂ ಸಿಬ್ಬಂದಿಗಳಾದ ವಸಂತ ನಾಯ್ಕ, ರಾಜೇಶ್ ನಾಯ್ಕ, ಸಚಿನ್ ನಾಯ್ಕ್, ನಾಗರಾಜ ನಾಯ್ಕ, ಜಿ ಬಿ ರಾಣೆ, ಕಿರಣ್ ಕುಮಾರ್, ಗಣೇಶ್ ದಾಸರ್ ಅವರು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ :ಮಂಜುನಾಥ ಹರಿಜನ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…