Latest

Bigg Boss: ನಿಂತ ಜಾಗದಲ್ಲೇ ಮೂತ್ರ ಮಾಡಿಕೊಂಡ ಆರ್ಯವರ್ಧನ್

ಬಿಗ್ ಬಾಸ್ ಕನ್ನಡದ ಸೀಸನ್ 9ರ ನಾಲ್ಕನೇ ವಾರದ ನಾಲ್ಕನೇ ದಿನ ಮನೆಯ ಸದಸ್ಯರಿಗೆ ಸಾಲು ಸಾಲು ಟಾಸ್ಕ್‌ಗಳನ್ನು ನೀಡಿದ್ದರು ಬಿಗ್ ಬಾಸ್.
ಅದರಲ್ಲಿ ಮೊದಲನೇ ಟಾಸ್ಕ್ ರಾತ್ರಿ ಇಡೀ ಲೈಟ್ ಸ್ವಿಚನ್ನು ಒತ್ತಿ ಹಿಡಿದುಕೊಂಡು ಇರಬೇಕು.
ಸ್ವಿಚ್ ಬಿಟ್ಟರೆ ಲೈಟ್ ಆಫ್ ಆಗಿ ಅವರು ಹೊರಬೇಕಾಗುತ್ತದೆ ಎಂಬ ನಿಯಮವಿತ್ತು. ಈ ಟಾಸ್ಕ್‌ನಲ್ಲಿ ರೂಪೇಶ್ ರಾಜಣ್ಣ ನೇತೃತ್ವದ ಕಾಮನಬಿಲ್ಲು ತಂಡ ಗೆಲುವು ಸಾಧಿಸಿತು. ಸ್ವಿಚ್ ಒತ್ತಿ ಹಿಡಿದು ಕೆಲವರು ರಾತ್ರಿಯಿಡೀ ನಿಂತು ಒದ್ದಾಡಿದರೆ, ಮತ್ತೆ ಕೆಲವರು ಸ್ವಲ್ಪ ಸಮಯಕ್ಕೇ ಕೈಬಿಟ್ಟು ನಿದ್ದೆಗೆ ಜಾರಿದ್ದರು. ಈ ಎಲ್ಲ ಪ್ರಹಸನಗಳ ಮಧ್ಯೆ ಆರ್ಯವರ್ಧನ್ ಅವರು ನಿಂತಲ್ಲೇ ನಿಂತು ಮೂತ್ರ ಮಾಡಿಕೊಂಡಿದ್ದು, ಮನೆಯ ಸದಸ್ಯರನ್ನು ನಗೆಗಡಲಲ್ಲಿ ತೇಲಿಸಿತ್ತು.
ಟಾಸ್ಕ್ ಗೆಲ್ಲಲೇಬೇಕೆಂದು ಹಠದಿಂದ ಸ್ವಿಚ್ ಹಿಡಿದು ನಿಂತಿದ್ದ ಆರ್ಯವರ್ಧನ್ ಪರಿ ಪರಿಯಾಗಿ ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಕಾವ್ಯಶ್ರೀ ಮೂತ್ರ ಮಾಡುವುದಿದ್ದರೆ ಅಲ್ಲೇ ಮಾಡಿಕೊಳ್ಳಿ ಎಂದು ತಮಾಷೆ ಮಾಡಿದರು. ಅದಕ್ಕೆ ಉತ್ತರಿಸಿದ ಆರ್ಯವರ್ಧನ್, ಅದಾಗಲೇ ಆಗಿದೆ ಎಂದು ಹೇಳಿದರು. ಇದಕ್ಕೆ ಮನೆಯ ಸದಸ್ಯರೆಲ್ಲ ಮುಖ ಸಿಂಡರಿಸಿ ಜೋರಾಗಿ ನಕ್ಕುಬಿಟ್ಟರು. ಸಮೀಪದಲ್ಲೇ ಇದ್ದ ವಿನೋದ್ ಗೊಬ್ಬರಗಾಲ, ಗುರುಗಳೇ ಹೊರಗಡೆ ಜನರು ನೋಡುತ್ತಿರುತ್ತಾರೆ ಅವರು ಏನೆಂದುಕೊಳ್ಳುವುದಿಲ್ಲ ನಿಮ್ಮ ಬಗ್ಗೆ ಯೋಚಿಸಿದ್ದೀರಾ? ಎಂದು ಪ್ರಶ್ನಿಸಿದರು.
ಟಾಸ್ಕ್ ಮುಗಿದ ಬಳಿಕ ಮಯೂರಿ ಡ್ರೆಸಿಂಗ್ ಕೊಠಡಿಯಲ್ಲಿ ಈ ಬಗ್ಗೆ ಮಾತನಾಡುತ್ತಿದ್ದರು. ಆರ್ಯವರ್ಧನ್ ಅವರು ಟಾಸ್ಕ್ ವೇಳೆ ಪದೇ ಪದೇ ಹಿಂದೆ ತಿರುಗಿ ನೋಡುತ್ತಿದ್ದರು. ಏನೆಂದು ನಾನು ಗಮನಿಸಿದೆ.. ಆ ದೃಶ್ಯ ಕಂಡು ಗಾಬರಿಯಾದೆ ಎಂದರು. ಜೋರಾಗಿ ನಗುವುದನ್ನು ಕೇಳಿ ಒಳಗೆ ಬಂದ ಆರ್ಯವರ್ಧನ್, ನೀವು ನನ್ನ ಬಗ್ಗೆಯೇ ಮಾತಾಡುತ್ತಿದ್ದೀರಿ ಎಂದು ತಿಳಿದಿದೆ. ಹಾಗೆಲ್ಲ ಆಗಿದ್ದು ನಿಜ ಎಂದು ಒಪ್ಪಿಕೊಂಡರು.

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

6 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

6 hours ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

6 hours ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

6 hours ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

6 hours ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

22 hours ago