Latest

Bigg Boss: ನಿಂತ ಜಾಗದಲ್ಲೇ ಮೂತ್ರ ಮಾಡಿಕೊಂಡ ಆರ್ಯವರ್ಧನ್

ಬಿಗ್ ಬಾಸ್ ಕನ್ನಡದ ಸೀಸನ್ 9ರ ನಾಲ್ಕನೇ ವಾರದ ನಾಲ್ಕನೇ ದಿನ ಮನೆಯ ಸದಸ್ಯರಿಗೆ ಸಾಲು ಸಾಲು ಟಾಸ್ಕ್‌ಗಳನ್ನು ನೀಡಿದ್ದರು ಬಿಗ್ ಬಾಸ್.
ಅದರಲ್ಲಿ ಮೊದಲನೇ ಟಾಸ್ಕ್ ರಾತ್ರಿ ಇಡೀ ಲೈಟ್ ಸ್ವಿಚನ್ನು ಒತ್ತಿ ಹಿಡಿದುಕೊಂಡು ಇರಬೇಕು.
ಸ್ವಿಚ್ ಬಿಟ್ಟರೆ ಲೈಟ್ ಆಫ್ ಆಗಿ ಅವರು ಹೊರಬೇಕಾಗುತ್ತದೆ ಎಂಬ ನಿಯಮವಿತ್ತು. ಈ ಟಾಸ್ಕ್‌ನಲ್ಲಿ ರೂಪೇಶ್ ರಾಜಣ್ಣ ನೇತೃತ್ವದ ಕಾಮನಬಿಲ್ಲು ತಂಡ ಗೆಲುವು ಸಾಧಿಸಿತು. ಸ್ವಿಚ್ ಒತ್ತಿ ಹಿಡಿದು ಕೆಲವರು ರಾತ್ರಿಯಿಡೀ ನಿಂತು ಒದ್ದಾಡಿದರೆ, ಮತ್ತೆ ಕೆಲವರು ಸ್ವಲ್ಪ ಸಮಯಕ್ಕೇ ಕೈಬಿಟ್ಟು ನಿದ್ದೆಗೆ ಜಾರಿದ್ದರು. ಈ ಎಲ್ಲ ಪ್ರಹಸನಗಳ ಮಧ್ಯೆ ಆರ್ಯವರ್ಧನ್ ಅವರು ನಿಂತಲ್ಲೇ ನಿಂತು ಮೂತ್ರ ಮಾಡಿಕೊಂಡಿದ್ದು, ಮನೆಯ ಸದಸ್ಯರನ್ನು ನಗೆಗಡಲಲ್ಲಿ ತೇಲಿಸಿತ್ತು.
ಟಾಸ್ಕ್ ಗೆಲ್ಲಲೇಬೇಕೆಂದು ಹಠದಿಂದ ಸ್ವಿಚ್ ಹಿಡಿದು ನಿಂತಿದ್ದ ಆರ್ಯವರ್ಧನ್ ಪರಿ ಪರಿಯಾಗಿ ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಕಾವ್ಯಶ್ರೀ ಮೂತ್ರ ಮಾಡುವುದಿದ್ದರೆ ಅಲ್ಲೇ ಮಾಡಿಕೊಳ್ಳಿ ಎಂದು ತಮಾಷೆ ಮಾಡಿದರು. ಅದಕ್ಕೆ ಉತ್ತರಿಸಿದ ಆರ್ಯವರ್ಧನ್, ಅದಾಗಲೇ ಆಗಿದೆ ಎಂದು ಹೇಳಿದರು. ಇದಕ್ಕೆ ಮನೆಯ ಸದಸ್ಯರೆಲ್ಲ ಮುಖ ಸಿಂಡರಿಸಿ ಜೋರಾಗಿ ನಕ್ಕುಬಿಟ್ಟರು. ಸಮೀಪದಲ್ಲೇ ಇದ್ದ ವಿನೋದ್ ಗೊಬ್ಬರಗಾಲ, ಗುರುಗಳೇ ಹೊರಗಡೆ ಜನರು ನೋಡುತ್ತಿರುತ್ತಾರೆ ಅವರು ಏನೆಂದುಕೊಳ್ಳುವುದಿಲ್ಲ ನಿಮ್ಮ ಬಗ್ಗೆ ಯೋಚಿಸಿದ್ದೀರಾ? ಎಂದು ಪ್ರಶ್ನಿಸಿದರು.
ಟಾಸ್ಕ್ ಮುಗಿದ ಬಳಿಕ ಮಯೂರಿ ಡ್ರೆಸಿಂಗ್ ಕೊಠಡಿಯಲ್ಲಿ ಈ ಬಗ್ಗೆ ಮಾತನಾಡುತ್ತಿದ್ದರು. ಆರ್ಯವರ್ಧನ್ ಅವರು ಟಾಸ್ಕ್ ವೇಳೆ ಪದೇ ಪದೇ ಹಿಂದೆ ತಿರುಗಿ ನೋಡುತ್ತಿದ್ದರು. ಏನೆಂದು ನಾನು ಗಮನಿಸಿದೆ.. ಆ ದೃಶ್ಯ ಕಂಡು ಗಾಬರಿಯಾದೆ ಎಂದರು. ಜೋರಾಗಿ ನಗುವುದನ್ನು ಕೇಳಿ ಒಳಗೆ ಬಂದ ಆರ್ಯವರ್ಧನ್, ನೀವು ನನ್ನ ಬಗ್ಗೆಯೇ ಮಾತಾಡುತ್ತಿದ್ದೀರಿ ಎಂದು ತಿಳಿದಿದೆ. ಹಾಗೆಲ್ಲ ಆಗಿದ್ದು ನಿಜ ಎಂದು ಒಪ್ಪಿಕೊಂಡರು.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

52 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

53 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

54 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

56 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

57 minutes ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

59 minutes ago