Latest

ಪೊಕ್ಸೊ ಕೇಸ್​ ಅಡಿ ಸಾಕ್ಷಿ ಕಲೆಹಾಕಲು ತೆರಳಿ; ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಎಎಸ್​ಐ!

ಸಾಕ್ಷಿ ಕಲೆ ಹಾಕುವ ಸಂದರ್ಭದಲ್ಲಿ ಪೊಕ್ಸೊ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಹಾಯಕ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಟಿಜಿ ಬಾಬು ನಿರೀಕ್ಷಣಾ ಜಾಮೀನು ನೀಡಲು ಕೇರಳದ ಕಲ್ಪೆಟಾದಲ್ಲಿರುವ ಪೊಕ್ಸೊ ನ್ಯಾಯಾಲಯ ನಿರಾಕರಿಸಿದೆ. ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ಎಎಸ್​ಐ ಬಾಬು ಪರಾರಿಯಾಗಿದ್ದು, ಈವರೆಗೂ ಪೊಲೀಸರು ಆತನ ಸುಳಿವು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿಲ್ಲ.
ಈ ಘಟನೆ ಕಳೆದ ಅಕ್ಟೋಬರ್​​ 26ರಂದು ನಡೆದಿದೆ. ಅಂಬಾಲವಯಾಲ್​ ಪೊಲೀಸರು ಸಂತ್ರಸ್ತ ಬಾಲಕಿಯನ್ನು ಸಾಕ್ಷಿ ಕಲೆ ಹಾಕಲೆಂದು ಊಟಿಗೆ ಕರೆದೊಯ್ಯಲಾಗಿತ್ತು. ಸಾಕ್ಷಿ ಕಲೆಹಾಕಿದ ಬಳಿಕ ಆಕೆಯನ್ನು ವಾಪಸ್​ ಕರೆತರುವಾಗ ಎಎಸ್​ಐ ಬಾಬು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ದೂರು ನೀಡಿರುವ ಬಾಲಕಿ, ಎಎಸ್​ಐ ಬಾಬು ಅವರು ನನ್ನನ್ನು ಪಕ್ಕಕ್ಕೆ ಎಳೆದುಕೊಂಡು ದೌರ್ಜನ್ಯ ಎಸಗಿದರು. ಅಲ್ಲದೆ, ತಮ್ಮ ಮೊಬೈಲ್​ನಲ್ಲಿ ಫೋಟೋವನ್ನು ತೆಗೆದುಕೊಂಡರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಪೊಕ್ಸೊ ಮಾತ್ರವಲ್ಲದೆ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಬಾಬು ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago