Sports

ಸೆಪ್ಟೆಂಬರ್ 9ರಿಂದ ದುಬೈನಲ್ಲಿ ಏಷ್ಯಾ ಕಪ್ ಟೂರ್ನಿ ಆರಂಭ- ಭಾರತ-ಪಾಕಿಸ್ತಾನ ಪಂದ್ಯದ ಡೇಟ್ ಫಿಕ್ಸ್!

ದುಬೈ, ಜುಲೈ 28 – ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಇಂದೀಗಷ್ಟೆ ಬಹುನಿರೀಕ್ಷಿತ ಏಷ್ಯಾ ಕಪ್ 2025ರ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಟೂರ್ನಿಯೆಲ್ಲಾ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) ದುಬೈನಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 9ರಿಂದ 28ರ ವರೆಗೆ ಟೂರ್ನಿಯು ನಡೆಯಲಿದೆ. ಟ್ವೆಂಟಿ-20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿವೆ.

ಗ್ರೂಪ್ ವಿಭಾಗ:

ಎರಡು ಗ್ರೂಪ್‌ಗಳಾಗಿ ತಂಡಗಳನ್ನು ವಿಂಗಡಿಸಲಾಗಿದ್ದು:

ಗ್ರೂಪ್ A: ಭಾರತ, ಪಾಕಿಸ್ತಾನ, ಯುಎಇ, ಓಮನ್

ಗ್ರೂಪ್ B: ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ, ಹಾಂಗ್ ಕಾಂಗ್

ಟೂರ್ನಿಯು ಹೀಗಿರುತ್ತದೆ:

ಸೆಪ್ಟೆಂಬರ್ 9ರಿಂದ 19ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿವೆ.

ನಂತರ ಪ್ರತಿ ಗುಂಪಿನಿಂದ ಎರಡು ಟಾಪ್ ತಂಡಗಳು ಸೂಪರ್ ಫೋರ್ ಹಂತವನ್ನು ಪ್ರವೇಶಿಸಲಿದೆ.

ಸೂಪರ್ ಫೋರ್ ಹಂತದ ಪಂದ್ಯಗಳು ಸೆಪ್ಟೆಂಬರ್ 20ರಿಂದ 26ರ ವರೆಗೆ ನಡೆಯಲಿದೆ.

ಫೈನಲ್ ಪಂದ್ಯ ಸೆಪ್ಟೆಂಬರ್ 28ರಂದು ನಡೆಯಲಿದೆ.

ಭಾರತದ ಪಂದ್ಯಗಳ ವೇಳಾಪಟ್ಟಿ ಹೀಗಿದೆ:

ಸೆಪ್ಟೆಂಬರ್ 10: ಭಾರತ vs ಯುಎಇ

ಸೆಪ್ಟೆಂಬರ್ 14: ಭಾರತ vs ಪಾಕಿಸ್ತಾನ (ಬಹುನಿರೀಕ್ಷಿತ ಡರ್ಬಿ)

ಸೆಪ್ಟೆಂಬರ್ 19: ಭಾರತ vs ಓಮನ್

ಪೂರ್ಣ ಪಂದ್ಯಾವಳಿ ವಿವರ:

1. ಸೆಪ್ಟೆಂಬರ್ 9 – ಅಫ್ಘಾನಿಸ್ತಾನ vs ಹಾಂಗ್ ಕಾಂಗ್

2. ಸೆಪ್ಟೆಂಬರ್ 10 – ಭಾರತ vs ಯುಎಇ

3. ಸೆಪ್ಟೆಂಬರ್ 11 – ಬಾಂಗ್ಲಾದೇಶ vs ಹಾಂಗ್ ಕಾಂಗ್

4. ಸೆಪ್ಟೆಂಬರ್ 12 – ಪಾಕಿಸ್ತಾನ vs ಓಮನ್

5. ಸೆಪ್ಟೆಂಬರ್ 13 – ಬಾಂಗ್ಲಾದೇಶ vs ಶ್ರೀಲಂಕಾ

6. ಸೆಪ್ಟೆಂಬರ್ 14 – ಭಾರತ vs ಪಾಕಿಸ್ತಾನ

7. ಸೆಪ್ಟೆಂಬರ್ 15 – ಶ್ರೀಲಂಕಾ vs ಹಾಂಗ್ ಕಾಂಗ್

8. ಸೆಪ್ಟೆಂಬರ್ 15 – ಓಮನ್ vs ಯುಎಇ

9. ಸೆಪ್ಟೆಂಬರ್ 16 – ಬಾಂಗ್ಲಾದೇಶ vs ಅಫ್ಘಾನಿಸ್ತಾನ

10. ಸೆಪ್ಟೆಂಬರ್ 17 – ಪಾಕಿಸ್ತಾನ vs ಯುಎಇ

11. ಸೆಪ್ಟೆಂಬರ್ 18 – ಶ್ರೀಲಂಕಾ vs ಅಫ್ಘಾನಿಸ್ತಾನ

12. ಸೆಪ್ಟೆಂಬರ್ 19 – ಭಾರತ vs ಓಮನ್

ಎಲ್ಲಾ ಪಂದ್ಯಗಳು ಸಂಜೆ 7:30ಕ್ಕೆ ನಡೆಯಲಿವೆ.

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಭಾರಿ ಕಾತುರ:

ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯ ಕನಸುಗಳೊಂದಿಗೆ ಇರುವ ಭಾರತ-ಪಾಕಿಸ್ತಾನ ಡರ್ಬಿ ಸೆಪ್ಟೆಂಬರ್ 14ರಂದು ನಡೆಯಲಿದ್ದು, ಟಿಕೆಟ್ ಕಮ್ಮಿಯಾಗಿರುವ ಸುದ್ದಿಯೇ ಅಭಿಮಾನಿಗಳ ಮುದ್ದಾದ ತಲೆನೋವಾಗಿದೆ. ಈ ಪಂದ್ಯವು ಟೂರ್ನಿಯ ಹೈಲೈಟ್ ಆಗಿ ಮಾರ್ಪಡಲಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

6 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

11 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

11 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

11 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

11 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

16 hours ago