
ಇಂಡಿ ತಾಲ್ಲೂಕಿನ ಲೋಣಿ (ಬಿ.ಕೆ.) ಗ್ರಾಮದಲ್ಲಿ ಸರ್ಕಾರಿ ರಸ್ತೆ ಅಳತೆ ಮಾಡಲು ತೆರಳಿದ್ದ ಭೂಮಾಪಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ.
ಸರ್ಕಾರಿ ರಸ್ತೆ ಅಳತೆ ವೇಳೆ ಹಲ್ಲೆ
ಚಡಚಣ ತಹಶೀಲ್ದಾರ್ ಆದೇಶದಂತೆ, ಭೂಮಾಪನ ಇಲಾಖೆಯ ಮಹಾಂತಪ್ಪ ಶ್ರೀಶೈಲ ಸಜ್ಜನ ಅವರು ಸರ್ವೇ ನಂ. 341 ಮತ್ತು 342ರಲ್ಲಿ ಸರ್ಕಾರಿ ರಸ್ತೆಯ ಅಳತೆ ಮಾಡಲು ಸ್ಥಳಕ್ಕೆ ತೆರಳಿದ್ದರು. ಅಳತೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭ ಗ್ರಾಮದ ವಿಕಾಸ ಕಲ್ಲಣ್ಣಗೌಡ ಪಾಟೀಲ, ರವೀಂದ್ರ ಗುರಪ್ಪ ಕಾಂಬ್ಳೆ, ಸಿದ್ದರಾಮ ಗಿರಮಲ್ಲ ಉಟಗಿ, ವಿಕಾಸ ಜೀವಪ್ಪ ಕಾಂಬಳೆ ಹಾಗೂ ಇತರರು ಆಕ್ಷೇಪ ವ್ಯಕ್ತಪಡಿಸಿ, ಅಳತೆಯನ್ನು ತಡೆಹಿಡಿಯಲು ಯತ್ನಿಸಿದರು.
ಇದರೊಂದಿಗೆ ಅವರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಶಾರೀರಿಕ ಮತ್ತು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಭೂಮಾಪನ ಇಲಾಖೆಯ ಆಕ್ರೋಶ, ಸರ್ಕಾರದ ಮಧ್ಯಸ್ಥಿಕೆ ಅಗತ್ಯ ಈ ಘಟನೆಯ ವಿರುದ್ಧ ಭೂಮಾಪನ ಇಲಾಖೆಯ ಸಿಬ್ಬಂದಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ.