ಶಿವಮೊಗ್ಗ, ಜುಲೈ 5: ನಗರದ ಎನ್.ಟಿ. ರಸ್ತೆಯ ಪಾಂಡುರಂಗ ವಿಠ್ಠಲ್ ದೇವಸ್ಥಾನ ಬಳಿಯಲ್ಲಿ ಜೂನ್ 28ರಂದು ನಡೆದಿದ್ದ ಹಲ್ಲೆ ಘಟನೆ ಒಂದು ವಾರದ ನಂತರ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯನ್ನು ಮೂವರು ಯುವಕರು ತೀವ್ರವಾಗಿ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೀಗ ವೈರಲ್ ಆಗುತ್ತಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಆ ದಿನ ಸಂಜೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಎನ್.ಟಿ. ರಸ್ತೆಯ ತುದಿಯಲ್ಲಿ ನಿಂತಿದ್ದ ವೇಳೆ, ಮೂವರು ಯುವಕರು ಹಠಾತ್ ಆತನ ಬಳಿ ಬಂದು ಗದ್ದಲ ಆರಂಭಿಸಿದರು. ತಕ್ಷಣವೇ ಆರೋಪಿಗಳು ಆ ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ರಸ್ತೆಯ ಬದಿಗೆ ಎಳೆದೊಯ್ದು ಲಾಠಿ ಮತ್ತು ಕೈಕಾಲಿನಿಂದ ನಿಲ್ಲದಂತೆ ಹಲ್ಲೆ ನಡೆಸಿದರು.
ಈ ದುಷ್ಕೃತ್ಯ ಸ್ಥಳೀಯ ದೇಗುಲದ ಬಳಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಢವಾಗಿ ದಾಖಲಾಗಿದ್ದು, ವಿಡಿಯೋವನ್ನು ಪರಿಶೀಲಿಸಿದ ಪೊಲೀಸರು ಇದೀಗ ಪ್ರಕರಣಕ್ಕೆ ಗಂಭೀರವಾಗಿ ಗಮನ ಹರಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…