Categories: CrimeLatest

ಬ್ಯೂಟಿ ಪಾರ್ಲರ್ ಬೆಡಗಿಯ ಸಹವಾಸ ಕುಟುಂಬವೇ ಸರ್ವನಾಶ; ಪ್ರಿಯತಮೆಯ ಹತ್ಯೆ, ಪ್ರಿಯಕರ ಆತ್ಮಹತ್ಯೆ..!

ಮೊದಲ ನೋಟಕ್ಕೆ ಸಾಮಾನ್ಯ ಸ್ನೇಹದಂತೆ ಆರಂಭವಾದ ಪರಿಚಯ, ಬಳಿಕ ಪ್ರೇಮ ಸಂಬಂಧವಾಗಿ ಬೆಳೆದು ಕೊನೆಗೆ ಭೀಕರ ಕೊಲೆ ಮತ್ತು ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಗಂಡನಿಂದ ದೂರವಾಗಿ ಬೆಂಗಳೂರಿನಲ್ಲಿ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಪ್ರಿಯಕರನ ಕೈಯಲ್ಲಿ ಹತ್ಯೆಯಾಗಿದ್ದು, ತನಿಖೆಯ ಭಯದಿಂದ ಆರೋಪಿ ತನ್ನ ತಾಯಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಳಿನಿ ಎಂಬ ಮಹಿಳೆ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸವಿದ್ದು, ಕೆಲವು ತಿಂಗಳ ಹಿಂದೆ ದೇವಸ್ಥಾನವೊಂದರಲ್ಲಿ ರಾಜಶೇಖರ ಎಂಬಾತನ ಪರಿಚಯವಾಗಿತ್ತು. ಪರಿಚಯವು ಬಳಿಕ ಆತ್ಮೀಯ ಸಂಬಂಧವಾಗಿ ಬೆಳೆದಿದ್ದು, ಇಬ್ಬರೂ ಹಲವು ಕಡೆ ಒಟ್ಟಿಗೆ ಸಂಚರಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಕಳೆದ ಕೆಲವು ವಾರಗಳಿಂದ ನಳಿನಿ ರಾಜಶೇಖರನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಆದರೆ ರಾಜಶೇಖರ ಮದುವೆಗೆ ನಿರಾಕರಿಸಿದ್ದು, ಈ ವಿಚಾರವಾಗಿ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣದಿಂದ ನಳಿನಿಯನ್ನು ಕೊಲೆ ಮಾಡಲು ರಾಜಶೇಖರ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ನಳಿನಿಯನ್ನು ನಂಬಿಸಿ ಕರೆದುಕೊಂಡು ಹೋದ ರಾಜಶೇಖರ, ಆಕೆಯನ್ನು ಹತ್ಯೆ ಮಾಡಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಜವನಹಳ್ಳಿಗುಡ್ಡದ ಸಮೀಪ ಮೃತದೇಹಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಪ್ರಕರಣದ ತನಿಖೆ ವೇಳೆ ಬೆಳಕವಾಡಿ ಟೋಲ್ ಪ್ಲಾಜಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಹತ್ಯೆಯಾದ ಬಳಿಕ ನಳಿನಿಯ ಮೃತದೇಹವನ್ನು ಕಾರಿನ ಮುಂಭಾಗದ ಸೀಟಿನಲ್ಲಿ ಇರಿಸಿಕೊಂಡೇ ರಾಜಶೇಖರ ಸಂಚರಿಸಿದ್ದಾನೆ ಎಂಬ ಅಂಶವನ್ನು ಪತ್ತೆಹಚ್ಚಿದ್ದಾರೆ.

ಇದಾದ ಬಳಿಕ ಪೊಲೀಸರು ವಿಚಾರಣೆಗೆ ಕರೆಸಿದಾಗ ರಾಜಶೇಖರ ಕಾರನ್ನು ಮಾರಾಟ ಮಾಡಿರುವುದಾಗಿ ಸುಳ್ಳು ಮಾಹಿತಿ ನೀಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಪೊಲೀಸರು ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಂತೆ ಬಂಧನದ ಭಯದಿಂದ ಜೂನ್ 28ರಂದು ತನ್ನ ತಾಯಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಘಟನೆಯ ಎಲ್ಲ ಆಯಾಮಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲಾರಿ ಕ್ಯಾಬಿನ್‌ನಿಂದ ₹20 ಸಾವಿರ ಕಳ್ಳತನ: 13 ಕಿ.ಮೀ. ಬೆನ್ನಟ್ಟಿ ಎಸ್‌ಐ ಹಿಡಿದ ಚಾಲಕ, ಅಮಾನತು ಆದೇಶ!

ಕರ್ತವ್ಯ ನಿರ್ವಹಿಸಬೇಕಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ವೊಬ್ಬರು ಲಾರಿ ಕ್ಯಾಬಿನ್‌ನಿಂದ ಹಣ ಕದ್ದ ಆರೋಪದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಭಾರೀ…

5 hours ago

ಕುಂದಾಪುರದ ಎನ್‌ಎಚ್-66ರಲ್ಲಿ ಭೀಕರ ಅಪಘಾತ: ಭಟ್ಕಳದ ಯುವಕ ಸೇರಿ ಇಬ್ಬರು ದುರ್ಮರಣ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಬೀಚ್ ಸಮೀಪದ ಅರಮ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದ ಭೀಕರ ರಸ್ತೆ…

6 hours ago

ಅತ್ತೆ–ಸೋದರಳಿಯ ಅಕ್ರಮ ಸಂಬಂಧದ ರಕ್ತಸಿಕ್ತ ಅಂತ್ಯ: ಬಾಡಿಗೆ ಮನೆಯಲ್ಲಿ ಯುವಕನ ಶವ, ರೈಲಿಗೆ ಸಿಲುಕಿ ಮಹಿಳೆ ಸಾವು!

ಪ್ರೀತಿ ಮತ್ತು ಅಕ್ರಮ ಸಂಬಂಧಗಳ ಪರಿಣಾಮ ಎಷ್ಟು ಭೀಕರವಾಗಿರಬಹುದು ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅತ್ತೆ…

6 hours ago

ಫೋನ್‌ಪೇ ಮೂಲಕ ಲಂಚ ಸ್ವೀಕಾರ: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರಗಿ: ಸರ್ಕಾರದ ವಸತಿ ಯೋಜನೆಯ ಅನುದಾನ ಬಿಡುಗಡೆ ಮಾಡಲು ಫಲಾನುಭವಿಯಿಂದ ಫೋನ್‌ಪೇ ಮೂಲಕ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಬಿಲ್…

11 hours ago

ಬ್ಯಾಲ್ಯಾಳದಲ್ಲಿ ಕಳಪೆ ಸಿಸಿ ರಸ್ತೆ ಕಾಮಗಾರಿ ಆರೋಪ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರ ಆಕ್ರೋಶ

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಯಲ್ಲಿ ವ್ಯಾಪಕ ಅಕ್ರಮ ಹಾಗೂ…

14 hours ago

ನ್ಯಾಯಾಧೀಶರೊಂದಿಗೆ ಅನುಚಿತ ವರ್ತನೆ: ಅರಕಲಗೂಡು ಪೊಲೀಸ್ ಸಿಬ್ಬಂದಿ ಜಗದೀಶ್ ಅಮಾನತು

ಹಾಸನ ಜಿಲ್ಲೆಯ ಅರಕಲಗೂಡು ಪೊಲೀಸ್ ಠಾಣೆಯ ಸಿಬ್ಬಂದಿ ಜಗದೀಶ್ ಅವರನ್ನು ಕರ್ತವ್ಯ ಲೋಪ, ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಹಾಗೂ ನ್ಯಾಯಾಧೀಶರೊಂದಿಗೆ…

1 day ago