ಹಾವೇರಿ: ಎಟಿಎಂ ಕಾರ್ಡ್ ವಂಚನೆ ನಡೆಸಿದ ಪ್ರಕರಣದಲ್ಲಿ ಹಿರೇಮೊರಬ ಗ್ರಾಮದ ಗಿರೀಶ್ ಎಂಬ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಘಟನೆ ಹೀಗಿದೆ— ಪಟ್ಟಣದ ಎಸ್ಬಿಎಂ ಬ್ಯಾಂಕ್ ಎದುರಿನ ಎಟಿಎಂನಲ್ಲಿ ಭಾಗ್ಯಜ್ಯೋತಿ ನಗರ ನಿವಾಸಿ ಕೆ. ದಾದಾಪೀರ್ ಅವರು ಮಿನಿ ಸ್ಟೇಟ್ಮೆಂಟ್ ಪಡೆಯಲು ತೆರಳಿದ್ದರು. ಈ ವೇಳೆ, ಗಿರೀಶ್ ಅವರು ಚಾಣಾಕ್ಷತನದಿಂದ ಅವರ ಎಟಿಎಂ ಕಾರ್ಡ್ ಅನ್ನು ಬದಲಾಯಿಸಿ, ಬೇರೊಂದು ಕಾರ್ಡ್ ಇಟ್ಟು ಮೋಸ ಮಾಡಿದ್ದಾನೆ.
ಕಾರ್ಡ್ ಬದಲಾವಣೆ ನಡೆದಿರುವುದು ಗಮನಿಸದೆ ದಾದಾಪೀರ್ ಎಟಿಎಂನಿಂದ ಹೊರ ಬಂದ ಬಳಿಕ, ಆರೋಪಿ ಗಿರೀಶ್ ಅವರ ಕಾರ್ಡ್ ಬಳಸಿ ₹30,000 ಹಣ ಡ್ರಾ ಮಾಡಿಕೊಂಡಿದ್ದಾನೆ. ಈ ಕುರಿತು ದಾದಾಪೀರ್ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಈ ಪ್ರಕರಣ ಸಂಬಂಧ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮುಂದಿನ ತನಿಖೆ ಮುಂದುವರಿಯುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…