ಮುಳಬಾಗಿಲು ಗ್ರಾಮಾಂತರ ಪೊಲೀಸರಿಂದ ದಿನಾಂಕ 03-01-2025 ರಂದು ಮಧ್ಯಾಹ್ನ ಸೊನ್ನವಾಡಿ ಗ್ರಾಮದ ಸರ್ಕಾರಿ ಜಾಗದಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳ ಮುಖಾಂತರ ಅಂದರ್-ಬಾಹರ್ ಜೂಜಾಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿ.ಎಸ್.ಐ. ವಿಠಲ್ ವೈ. ತಳವಾ‌ರ್ ಹಾಗೂ ಅವರ ಸಿಬ್ಬಂದಿ ಅನಿಲ್ ಕುಮಾರ್, ಮಂಜುನಾಥ ರೆಡ್ಡಿ, ಶಂಕರಪ್ಪ, ಶ್ರೀನಾಥ್ ರವರು ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಮುಳಬಾಗಿಲು ನಿವಾಸಿಗಳಾದ ನಾಗರಾಜ, ಆನಂದ, ರಾಜೇಶ ಮತ್ತು ಹರೀಶ್ ಕುಮಾರ್ ರವರನ್ನು ಬಂಧಿಸಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಒಟ್ಟು 6100/-ರೂ. ನಗದು ಹಣ ಮತ್ತು ಇಸ್ಪೀಟು ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡು ಕಾನೂನು ಕೈಗೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ವರದಿ: ರೋಶನ್ ಜಮೀರ್

Related News

error: Content is protected !!