ಮುಳಬಾಗಿಲು ಗ್ರಾಮಾಂತರ ಪೊಲೀಸರಿಂದ ದಿನಾಂಕ 03-01-2025 ರಂದು ಮಧ್ಯಾಹ್ನ ಸೊನ್ನವಾಡಿ ಗ್ರಾಮದ ಸರ್ಕಾರಿ ಜಾಗದಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳ ಮುಖಾಂತರ ಅಂದರ್-ಬಾಹರ್ ಜೂಜಾಟ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿ.ಎಸ್.ಐ. ವಿಠಲ್ ವೈ. ತಳವಾರ್ ಹಾಗೂ ಅವರ ಸಿಬ್ಬಂದಿ ಅನಿಲ್ ಕುಮಾರ್, ಮಂಜುನಾಥ ರೆಡ್ಡಿ, ಶಂಕರಪ್ಪ, ಶ್ರೀನಾಥ್ ರವರು ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಮುಳಬಾಗಿಲು ನಿವಾಸಿಗಳಾದ ನಾಗರಾಜ, ಆನಂದ, ರಾಜೇಶ ಮತ್ತು ಹರೀಶ್ ಕುಮಾರ್ ರವರನ್ನು ಬಂಧಿಸಿ ಜೂಜಾಟದಲ್ಲಿ ಪಣಕ್ಕೆ ಇಟ್ಟಿದ್ದ ಒಟ್ಟು 6100/-ರೂ. ನಗದು ಹಣ ಮತ್ತು ಇಸ್ಪೀಟು ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡು ಕಾನೂನು ಕೈಗೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಈ ಕಾರ್ಯಕ್ಕೆ ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ವರದಿ: ರೋಶನ್ ಜಮೀರ್
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…