ಶಿವಮೊಗ್ಗ (ಜು.28): ಜಿಲ್ಲೆಯ ಸಾಗರದಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆರೋಪಿಗಳಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶ ನೀಡಿದೆ. ಇದರೊಂದಿಗೆ ಆರೋಪಿಗಳು ಕಾನೂನು ಸಂಕಷ್ಟಕ್ಕೆ ಸಿಲುಕಿರುವುದು ಖಚಿತವಾಗಿದೆ.
2019ರ ಫೆಬ್ರವರಿ 28ರಂದು ರಾತ್ರಿ, ಸಾಗರ ಪೇಟೆಯ ಮಾರ್ಕೆಟ್ ರಸ್ತೆಯಲ್ಲಿ ಪ್ರಸಿದ್ಧ ವಕೀಲರಾಗಿರುವ ರಾಜೇಶ್ ಎಸ್.ಬಿ ಮೇಲೆ ಹೊಡೆದಾಡಾಟಕ್ಕೆ ಇಳಿದ ಪ್ರಕರಣವು ದಾಖಲಾಗಿದೆ. ಈ ವೇಳೆ, ಅಂದಿನ ಸಾಗರ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಇ.ಓ. ಮಂಜುನಾಥ್, ಪೊಲೀಸ್ ಪೇದೆ ಸೈನು ನದಾಫಾ ಮತ್ತು ಹೋಂ ಗಾರ್ಡ್ ಕೃಷ್ಣಪ್ಪ ಸೇರಿ ವಕೀಲರ ಮೇಲೆ ಶಾರೀರಿಕ ದೌರ್ಜನ್ಯ ಎಸಗಿದ್ದರು ಎನ್ನಲಾಗಿದೆ.
ಘಟನೆಯ ಬಳಿಕ, ರಾಜೇಶ್ ಎಸ್.ಬಿ ಅವರು ಖಾಸಗಿ ಪಿರ್ಯಾದಿಯನ್ನು (PCR No.77/2019) ಸಲ್ಲಿಸಿದ್ದು, ಸಾಗರದ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಿತ್ತು. ನ್ಯಾಯಾಲಯದ ಆದೇಶದಂತೆ, ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಯಿತು. ಆದರೆ ನಂತರ ತನಿಖಾ ಅಧಿಕಾರಿಗಳು ಆರೋಪಿಗಳಿಗೆ ಚಿಟ್ ನೀಡುತ್ತಾ ‘ಬಿ ವರದಿ’ ಸಲ್ಲಿಸಿದರು.
ಆದರೆ, ವಿಚಾರಣೆ ನಡೆಸಿದ ಪಿ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಮಾದೇಶ್ ಎಂ.ವಿ ಅವರು ‘ಬಿ ವರದಿ’ಯನ್ನು ತಳ್ಳಿಹಾಕಿ, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳು 193 (ಸತ್ಯವಲ್ಲದ ಸಾಕ್ಷ್ಯ ನೀಡುವುದು), 323 (ಸಾಧಾರಣ ಗಾಯಗೊಳಿಸುವುದು), 337, 341, 342 (ಬೇಧಕ ಬಂಧನ), 352 (ಹಲ್ಲೆ), 355, 357, 504 (ಉದ್ದೀಪನಕಾರಿ ಮಾತುಗಳು), 506 (ಧಮಕಿ), ಮತ್ತು 34 (ಸಾಮೂಹಿಕ ಅಪರಾಧ) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ ನೀಡಿದರು.
ಪಿರ್ಯಾದಿದಾರರ ಪರವಾಗಿ ಖ್ಯಾತ ನ್ಯಾಯವಾದಿ ರಮೇಶ್ ಹೆಚ್.ಬಿ. ಶಿರವಾಳ ಕಠಿಣ ವಾದ ಮಂಡಿಸಿದರು. ಇದೀಗ ನ್ಯಾಯಾಲಯದ ಈ ಆದೇಶದಿಂದ, ಸರಕಾರೀ ಅಧಿಕಾರಿಗಳ ಕಾನೂನು ಪಾಠದ ದಿನ ಆರಂಭವಾಗಿದೆ ಎಂಬ ಅಭಿಪ್ರಾಯ ನ್ಯಾಯ ವೃತ್ತದಲ್ಲಿ ವ್ಯಕ್ತವಾಗುತ್ತಿದೆ.
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…