ಆಂಡರಸನ್ಪೇಟೆ ಪೊಲೀಸರು ಕರ್ತವ್ಯ ನಿರತ ಲೈನ್ಮನ್ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪೊಗರಪಲ್ಲಿ ನಿವಾಸಿ ಜ್ಞಾನೇಂದ್ರ ರೆಡ್ಡಿಯನ್ನು ಸೋಮವಾರ ಬಂಧಿಸಿದ್ದಾರೆ.
ಮೇ 21ರಂದು ಗುಡಿಬಂಡೆ ತಾಲ್ಲೂಕಿನ ಕೆಂಪಾಪುರ ಗ್ರಾಮದಲ್ಲಿ ಲೈನ್ಮನ್ ವೆಂಕಟರಾಮ ಅವರು ಮನೆ ಮನೆಗೆ ತೆರಳಿ ವಿದ್ಯುತ್ ಸಂಪರ್ಕ ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದ ಬೈಕ್ ಅನ್ನು ತೆರವಿಗೆ ಹಾಕುವಂತೆ ಅವರು ಬೈಕ್ ಸವಾರ ಜ್ಞಾನೇಂದ್ರ ರೆಡ್ಡಿಗೆ ವಿನಂತಿಸಿದ್ದರಿಂದ ಮಾತಿನ ಚಕಮಕಿ ಉಂಟಾಗಿ, ವಾಗ್ವಾದ ಉಲ್ಬಣವಾಗಿ ಹಲ್ಲೆಗೆ ಕಾರಣವಾಗಿದೆ.
ಘಟನೆ ನಡೆದಾಗಿನಿಂದ ಐದು ದಿನಗಳ ಕಾಲ ಆರೋಪಿಯನ್ನು ಬಂಧಿಸದಿದ್ದ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದ ಬೆಸ್ಕಾಂ ಲೈನ್ಮನ್ಗಳ ಸಂಘ ಹಾಗೂ ದಲಿತ ಹಿತ ರಕ್ಷಣಾ ಸಂಘಟನೆಗಳು ಸೋಮವಾರ ಆಂಡರಸನ್ಪೇಟೆ ಪೊಲೀಸ್ ಠಾಣೆ ಎದುರು ಧರಣಿಗೆ ಸಜ್ಜಾಗಿದ್ದವು.
ಸಂಘಟನೆಗಳ ಒತ್ತಡದ ನಡುವೆಯೇ ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…