ಆಂಡರಸನ್ಪೇಟೆ ಪೊಲೀಸರು ಕರ್ತವ್ಯ ನಿರತ ಲೈನ್ಮನ್ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪೊಗರಪಲ್ಲಿ ನಿವಾಸಿ ಜ್ಞಾನೇಂದ್ರ ರೆಡ್ಡಿಯನ್ನು ಸೋಮವಾರ ಬಂಧಿಸಿದ್ದಾರೆ.
ಮೇ 21ರಂದು ಗುಡಿಬಂಡೆ ತಾಲ್ಲೂಕಿನ ಕೆಂಪಾಪುರ ಗ್ರಾಮದಲ್ಲಿ ಲೈನ್ಮನ್ ವೆಂಕಟರಾಮ ಅವರು ಮನೆ ಮನೆಗೆ ತೆರಳಿ ವಿದ್ಯುತ್ ಸಂಪರ್ಕ ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ರಸ್ತೆ ಮಧ್ಯೆ ನಿಲ್ಲಿಸಲಾಗಿದ್ದ ಬೈಕ್ ಅನ್ನು ತೆರವಿಗೆ ಹಾಕುವಂತೆ ಅವರು ಬೈಕ್ ಸವಾರ ಜ್ಞಾನೇಂದ್ರ ರೆಡ್ಡಿಗೆ ವಿನಂತಿಸಿದ್ದರಿಂದ ಮಾತಿನ ಚಕಮಕಿ ಉಂಟಾಗಿ, ವಾಗ್ವಾದ ಉಲ್ಬಣವಾಗಿ ಹಲ್ಲೆಗೆ ಕಾರಣವಾಗಿದೆ.
ಘಟನೆ ನಡೆದಾಗಿನಿಂದ ಐದು ದಿನಗಳ ಕಾಲ ಆರೋಪಿಯನ್ನು ಬಂಧಿಸದಿದ್ದ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದ ಬೆಸ್ಕಾಂ ಲೈನ್ಮನ್ಗಳ ಸಂಘ ಹಾಗೂ ದಲಿತ ಹಿತ ರಕ್ಷಣಾ ಸಂಘಟನೆಗಳು ಸೋಮವಾರ ಆಂಡರಸನ್ಪೇಟೆ ಪೊಲೀಸ್ ಠಾಣೆ ಎದುರು ಧರಣಿಗೆ ಸಜ್ಜಾಗಿದ್ದವು.
ಸಂಘಟನೆಗಳ ಒತ್ತಡದ ನಡುವೆಯೇ ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…