ಉತ್ತರ ಕನ್ನಡ/ಹಳಿಯಾಳ: ಸ್ವತ್ತಿನ ಅವರಾಧ ಪ್ರಕರಣಗಳು ಹಾಗೂ ಅಕ್ರಮ ಬಡ್ಡಿ ವ್ಯವಹಾರ. ಗ್ಯಾನ್ಸಿಂಗ್ ಇತ್ಯಾದಿ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಹಾಗೂ ದೂರುಗಳು ಬಂದಿದ್ದು, ಅದರಂತೆ ದಿನಾಂಕ: 05-02-2025 ರಂದು ಪೋಲೀಸ್ ಉಪಾಧಿಕ್ಷಕರು. ದಾಂಡೇಲಿ ರವರ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ರಚನೆ ಮಾಡಿ, ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.
ಅದರಂತೆ ಹಳಿಯಾಳ ಪೊಲೀಸ್ ವ್ಯಾಪ್ತಿಯ, ಸುಮಾರು 7 ಕಡೆ ಬಡ್ಡಿ ವ್ಯವಹಾರ ಮಾಡಿ ಬಂದ ಹಣದಿಂದ ಜೂಜಾಟ ಆಡುತ್ತಿರುವ ಬಗ್ಗೆ ಖಚಿತವಾದ ಮಾಹಿತಿಯ ಮೇರೆಗೆ ಮನೆಯನ್ನು ಸರ್ಚ ಮಾಡಲು ಸರ್ಚ ವಾರೆಂಟ್ ಅನುಮತಿ ಆದೇಶವನ್ನು ಪಡೆದು. ಬಡ್ಡಿ ವ್ಯವಹಾರ ಮಾಡಿ ಬಂದ ಹಣದಿಂದ ಜೂಜಾಡುತ್ತಿದ್ದ 1) ಶ್ರೀ ಚಂದ್ರಕಾಂತ ನಾರಾಯಣ ಗೊಂದಆ ಸಾ।। ಕಿಲ್ಲಾ, ಹಳಿಯಾಳ. 2) ಶ್ರೀ ಪ್ರಕಾಶ ಶಿವಾಜಿ ಗಾಂಜಾಳಿ ಸಾ॥ ಗುತ್ತಿಗೇರಿ ಗಲ್ಲ, ಹಳಿಯಾಳ, 3) ಶ್ರೀ ವಿಜಯ ನೀಲಕಂಠ ಬೊಬಾಟಿ ಸಾ॥ ಕಿಲ್ಲಾ, ಹಳಿಯಾಳ, 4) ಶ್ರೀ ರಾಕೇಶ ದಿನಕರ ವಾಲೇಕರ ಸಾ।। ಚೌಹಾಣ ಪ್ಲಾಟ್, ಹಳಿಯಾಳ, 5) ಶ್ರೀ ಪವನ ಜೀವನ ಹಳ್ಳೂರ ಸಾ। ಕಾರ್ಮೆಲ್ ಕ್ರಾಸ್, ಹಳಿಯಾಳ, 6) ಶ್ರೀ ಸಂತೋಷ ಸಿದ್ದಪ್ಪ ನಾಯ್ಕ ಸಾ|| ಚಲುವಾದಿ ಗಲ್ಲಿ, ಹಳಿಯಾಳ, 7) ಶ್ರೀ ಶುಭಂ ತಂದೆ ರಾಮನಾಥ ನಾಯ್ಕ ಸಾ|| ಚೌಹಾಣ ಪ್ಲಾಟ್, ಹಳಿಯಾಳ ರವರ ವಾಸದ ಸ್ಥಳಗಳಲ್ಲಿ ದಾಳಿ ನಡೆಸಿ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಭದ್ರತಾ ಕಾಯ್ದೆಯಡಿಯಲ್ಲಿ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ.
ದಿನಾಂಕ: 05-02-2025 ರಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಬಡ್ಡಿ ವ್ಯವಹಾರವನ್ನು ಹತ್ತಿಕ್ಕಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ವರದಿ: ಮಂಜುನಾಥ್ ಎಫ್ ಹೆಚ್
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…