Latest

ಮೀಟರ್ ಬಡ್ಡಿ ಲೇವಾದೇವಿ ಮಾಡುವವರ ಮೇಲೆ ದಾಳಿ; ಹಳಿಯಾಳ ಪೊಲೀಸರ ಕಾಯಾಚರಣೆ

ಉತ್ತರ ಕನ್ನಡ/ಹಳಿಯಾಳ: ಸ್ವತ್ತಿನ ಅವರಾಧ ಪ್ರಕರಣಗಳು ಹಾಗೂ ಅಕ್ರಮ ಬಡ್ಡಿ ವ್ಯವಹಾರ. ಗ್ಯಾನ್ಸಿಂಗ್ ಇತ್ಯಾದಿ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಹಾಗೂ ದೂರುಗಳು ಬಂದಿದ್ದು, ಅದರಂತೆ ದಿನಾಂಕ: 05-02-2025 ರಂದು ಪೋಲೀಸ್ ಉಪಾಧಿಕ್ಷಕರು. ದಾಂಡೇಲಿ ರವರ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ರಚನೆ ಮಾಡಿ, ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.
ಅದರಂತೆ ಹಳಿಯಾಳ ಪೊಲೀಸ್ ವ್ಯಾಪ್ತಿಯ, ಸುಮಾರು 7 ಕಡೆ ಬಡ್ಡಿ ವ್ಯವಹಾರ ಮಾಡಿ ಬಂದ ಹಣದಿಂದ ಜೂಜಾಟ ಆಡುತ್ತಿರುವ ಬಗ್ಗೆ ಖಚಿತವಾದ ಮಾಹಿತಿಯ ಮೇರೆಗೆ ಮನೆಯನ್ನು ಸರ್ಚ ಮಾಡಲು ಸರ್ಚ ವಾರೆಂಟ್ ಅನುಮತಿ ಆದೇಶವನ್ನು ಪಡೆದು. ಬಡ್ಡಿ ವ್ಯವಹಾರ ಮಾಡಿ ಬಂದ ಹಣದಿಂದ ಜೂಜಾಡುತ್ತಿದ್ದ 1) ಶ್ರೀ ಚಂದ್ರಕಾಂತ ನಾರಾಯಣ ಗೊಂದಆ ಸಾ।। ಕಿಲ್ಲಾ, ಹಳಿಯಾಳ. 2) ಶ್ರೀ ಪ್ರಕಾಶ ಶಿವಾಜಿ ಗಾಂಜಾಳಿ ಸಾ॥ ಗುತ್ತಿಗೇರಿ ಗಲ್ಲ, ಹಳಿಯಾಳ, 3) ಶ್ರೀ ವಿಜಯ ನೀಲಕಂಠ ಬೊಬಾಟಿ ಸಾ॥ ಕಿಲ್ಲಾ, ಹಳಿಯಾಳ, 4) ಶ್ರೀ ರಾಕೇಶ ದಿನಕರ ವಾಲೇಕರ ಸಾ।। ಚೌಹಾಣ ಪ್ಲಾಟ್, ಹಳಿಯಾಳ, 5) ಶ್ರೀ ಪವನ ಜೀವನ ಹಳ್ಳೂರ ಸಾ। ಕಾರ್ಮೆಲ್ ಕ್ರಾಸ್, ಹಳಿಯಾಳ, 6) ಶ್ರೀ ಸಂತೋಷ ಸಿದ್ದಪ್ಪ ನಾಯ್ಕ ಸಾ|| ಚಲುವಾದಿ ಗಲ್ಲಿ, ಹಳಿಯಾಳ, 7) ಶ್ರೀ ಶುಭಂ ತಂದೆ ರಾಮನಾಥ ನಾಯ್ಕ ಸಾ|| ಚೌಹಾಣ ಪ್ಲಾಟ್, ಹಳಿಯಾಳ ರವರ ವಾಸದ ಸ್ಥಳಗಳಲ್ಲಿ ದಾಳಿ ನಡೆಸಿ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಭದ್ರತಾ ಕಾಯ್ದೆಯಡಿಯಲ್ಲಿ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ.

ದಿನಾಂಕ: 05-02-2025 ರಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಬಡ್ಡಿ ವ್ಯವಹಾರವನ್ನು ಹತ್ತಿಕ್ಕಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ವರದಿ: ಮಂಜುನಾಥ್ ಎಫ್ ಹೆಚ್

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago