ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ಸರ್ಕಾರಿ ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಮೇಲೆ ಬೈಕ್ ಸವಾರನು ಮತ್ತು ಅವನ ತಂಡ ಮಾಡಿರುವ ಹಲ್ಲೆ ಪ್ರಕರಣ ಒಂದು ಆತಂಕ ಮೂಡಿಸಿದೆ.
ಘಟನೆ ನಡೆದಿದ್ದು, ಬಸ್ ಜಗದಾಳ ಹಾದಿ ಮೂಲಕ ಸಾಗುತ್ತಿದ್ದ ಸಮಯದಲ್ಲಿ. ದಿಢೀರ್ ಅಡ್ಡ ಬಂದ ಬೈಕ್ ಸವಾರನಿಗೆ ಬಸ್ ಚಾಲಕನು “ನಿಧಾನವಾಗಿ ಓಡಿಸಪ್ಪ” ಎಂಬ ಸೂಕ್ಷ್ಮ ಸಲಹೆ ನೀಡಿದ ಸಂದರ್ಭ, ಅದೇನು ದೊಡ್ಡ ಅವಮಾನವೋ ಎಂಬಂತೆ ಬೈಕ್ ಸವಾರನು ತಕ್ಷಣವೇ ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾನೆ.
ಕೋಪದ ಮೆರವಣಿಗೆಯಲ್ಲಿ ತನ್ನ ಗೆಳೆಯರನ್ನು ಸ್ಥಳಕ್ಕೆ ಕರೆಸಿದ ಬೈಕ್ ಸವಾರ, ಬಸ್ ಚಾಲಕನನ್ನು ಅಟ್ಟಾಡಿಸಿಕೊಂಡು ಕೊನೆಗೆ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಬಸ್ ಕಂಡಕ್ಟರ್ ಕೂಡ ಲಘು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ.
ಇಡೀ ಘಟನೆ ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬನ ಮೊಬೈಲ್ ಕ್ಯಾಮೆರಾದಲ್ಲಿ ದಾಖಲೆಯಾಗಿದೆ. ಹಲ್ಲೆಗೆ ಕಾರಣವಾದ ಯುವಕರ ಗುರುತು ಪತ್ತೆ ಹಚ್ಚಲು ಪೊಲೀಸರು ಈಗ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…