ಹಾಸನ: ತಿಂಡಿ ಖರೀದಿಸಿ ಹಣ ನೀಡದೆ ತೆರಳುತ್ತಿದ್ದವರನ್ನು ಪ್ರಶ್ನಿಸಿದ ಕಾರಣಕ್ಕೆ ಬೇಕರಿ ಮಾಲೀಕನ ಮೇಲೆ ದಾಳಿಯ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಮಧ್ಯಾಹ್ನವೇ ಮದ್ಯದ ಅಮಲಿನಲ್ಲಿ ಇದ್ದ ಯುವಕರ ಗುಂಪೊಂದು ಬೇಕರಿಗೆ ನುಗ್ಗಿ ಮಾಲೀಕ ಹಾಗೂ ಮತ್ತೋರ್ವ ವ್ಯಕ್ತಿಗೆ ಹಲ್ಲೆ ನಡೆಸಿದ ಘಟನೆ ಆತಂಕ ಮೂಡಿಸಿದೆ.
ಹಳ್ಳಿಮೈಸೂರು ಕ್ರಾಸ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 373 ಸಮೀಪದ ಬೇಕರಿಯಲ್ಲಿ ಈ ಘಟನೆ ನಡೆದಿದೆ. ಕೆಲ ಯುವಕರು ತಿಂಡಿ ಖರೀದಿಸಿ ಹಣ ಕೊಡದೇ ಹೋಗುತ್ತಿದ್ದನ್ನು ಪ್ರಶ್ನಿಸಿದ ವೇಳೆ ಗಲಾಟೆ ಆರಂಭವಾಗಿದೆ. ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ಹಲ್ಲೆಗೆ ತಿರುಗಿದ್ದು, ಮೂವರು ಸೇರಿ ಬೇಕರಿ ಮಾಲೀಕ ಹಾಗೂ ಪ್ರಶ್ನಿಸಿದ ಮತ್ತೋರ್ವ ವ್ಯಕ್ತಿಯ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಕೃತ್ಯ ಸಂಪೂರ್ಣವಾಗಿ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಗಳ ನಿರ್ದಯ ವರ್ತನೆ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಘಟನೆ ಬಳಿಕ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಪ್ರಕರಣ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ದಾಳಿಗಳು ನಡೆಯುತ್ತಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎಬ್ಬಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…