ಕೋಲಾರದಲ್ಲಿ ಲಂಚ ಸ್ವೀಕರಿಸುವ ವೇಳೆ ನಡೆದ ಲೋಕಾಯುಕ್ತ ದಾಳಿ ಸಿನಿಮೀಯ ತಿರುವು ಪಡೆದುಕೊಂಡಿದ್ದು, ಪರಾರಿಯಾಗಲು ಯತ್ನಿಸಿದ ಸಹಾಯಕ ಔಷಧ ನಿಯಂತ್ರಕಿ ಕೊನೆಗೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಔಷಧ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪರವಾನಗಿ ನೀಡುವ ಸಂಬಂಧ ₹35 ಸಾವಿರ ಲಂಚ ಕೇಳಲಾಗಿದೆ ಎಂಬ ಆರೋಪದ ಮೇಲೆ ಟೇಕಲ್ನ ಅಂಗಡಿ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಲೋಕಾಯುಕ್ತ ತಂಡ ಕಾರ್ಯಾಚರಣೆ ನಡೆಸಿತು.
ಲಂಚದ ಹಣವನ್ನು ಕಾರಿನಲ್ಲೇ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆ್ಯಂಟೊನಿ ಜಾನ್ ನೇತೃತ್ವದ ತಂಡ ದಾಳಿ ನಡೆಸಿತು. ದಾಳಿ ನಡೆಯುತ್ತಿದ್ದಂತೆಯೇ ಸಹಾಯಕ ಔಷಧ ನಿಯಂತ್ರಕಿ ಜೆ. ಶ್ಯಾಮಲಾ ಅವರು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದರು. ತಮ್ಮೊಂದಿಗೆ ಕಚೇರಿಯ ‘ಡಿ’ ಗ್ರೂಪ್ ನಿವೃತ್ತ ನೌಕರ ಶ್ರೀನಿವಾಸ್ ಹಾಗೂ ಚಾಲಕನನ್ನು ಕರೆದುಕೊಂಡು ಕಾರಿನಲ್ಲಿ ಪರಾರಿಯಾಗಿದರು.
ಬಂಗಾರಪೇಟೆ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರನ್ನು ಲೋಕಾಯುಕ್ತ ಪೊಲೀಸರು ಸುಮಾರು 15 ಕಿಲೋಮೀಟರ್ಗಳವರೆಗೆ ಬೆನ್ನಟ್ಟಿದರು. ಕೊನೆಗೆ ತಮ್ಮ ವಾಹನವನ್ನು ಆರೋಪಿಗಳ ಕಾರಿಗೆ ಅಡ್ಡ ನಿಲ್ಲಿಸಿ ಅವರನ್ನು ವಶಕ್ಕೆ ಪಡೆದರು.
ಈ ಘಟನೆಯಲ್ಲಿ ಜೆ. ಶ್ಯಾಮಲಾ, ಶ್ರೀನಿವಾಸ್ ಮತ್ತು ಕಾರಿನ ಚಾಲಕ ಮಹಾಂತೇಶ್ ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅಧೀಕ್ಷಕ ಆ್ಯಂಟೊನಿ ಜಾನ್ ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…